ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸುಮಾರು 2 ವರ್ಷ ಕಳೆಯುತ್ತಿವೆ. ಈ 2 ವರ್ಷಗಳಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡಿದೆ. ಈ ಹಿಂದೆ ಚುನಾವಣೆ ವೇಳೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡುತ್ತೇವೆಂದು ಭರವಸೆ ನೀಡಿತ್ತು. ಅದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರದಿಂದ ಪೌರ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಂದೇ ದಿನ 12,692 ಪೌರಕಾರ್ಮಿಕರಿಗೆ ನೇಮಕಾತಿ ಅದೇಶ ಪತ್ರ ವಿತರಿಸುವುದಾಗಿ ತಿಳಿಸಲಾಗಿದೆ. ಇಷ್ಟು ದಿನ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿರು ಕಾರ್ಯ ನಿರ್ವಹಿಸುತ್ತಿದ್ದರು. ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಅದೇಶ ಪತ್ರ ವಿತರಿಸಲಾಗುವುದು. ಕಾರ್ಯಕ್ರಮದಲ್ಲಿ ಸಿಎಂ .ಡಿಸಿಎಂ ಸೇರಿದಂತೆ ಸಚಿವ ಸಂಪುಟದ ಕೆಲ ಮಂತ್ರಿಗಳು ಭಾಗಿಯಾಗಲಿದ್ದಾರೆ.