ಬೆಂಗಳೂರು: ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಪಿ.ಯು ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿ ಊಟದ ವ್ಯವಸ್ಥೆಯನ್ನು ಮಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ.
ಈಗಾಗಲೇ 1 ರಿಂದ 10 ನೇ ತರಗತಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡಲಾಗುತ್ತಿದ್ದು, ಇದೀಗ, ಹೊಸದಾಗಿ ಪಿ.ಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲು ಸರ್ಕಾರ ಚಿಂತನೆ ಮಾಡುತ್ತಿದೆ.
ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಿ.ಯು ವ್ಯಾಸಂಗ ಮಾಡುತ್ತಿದ್ದು, ಅದರಲ್ಲೂ ಹಳ್ಳಿಗಾಡಿನ ಮಕ್ಕಳೆ ಹೆಚ್ಚು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ಬಡ ಮಕ್ಕಳಿಗೆ ಮತ್ತೊಂದು ಭಾಗ್ಯ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನೀವೆಷ್ಟು ದುಡ್ಡು ಪಾವತಿಸಬೇಕು? ಇಲ್ಲಿದೆ ಮಾಹಿತಿ



















