ಬೆಂಗಳೂರು: ಗ್ರಾಮ ಪಂಚಾಯಿತಿಗಳ ಉಪಚುನಾವಣೆಗಳನ್ನು ಮುಂದೂಡಲಾಗಿದೆ.
ನಾಳೆಯಿಂದ ಶುರುವಾಗಬೇಕಿದ್ದ ಗ್ರಾಮ ಪಂಚಾಯಿತಿ ಉಪಚುನಾವಣೆ ಅಧಿ ಸೂಚನೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಮಯಾವಕಾಶ ಕೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯೂ ಹೆಚ್ಚಿನ ಸಮಯಾವಕಾಶ ಕೋರಿದ್ದಾರೆ. ಹೀಗಾಗಿ ಚುನಾವಣೆ ಮುಂದೂಡಲಾಗಿದೆ. ಚುನಾವಣಾ ಆಯೋಗ 222 ಗ್ರಾಮ ಪಂಚಾಯಿತಿಗಳ ಉಪಚುನಾವಣೆಯ ಅಧಿಸೂಚನೆಯನ್ನು ಹೊರಡಿಸಬೇಕಿತ್ತು. ಆದರೆ, ಈಗ ಮುಂದೂಡಲಾಗಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಚುನಾವಣೆ ಕೂಡ ನಡೆಯಬೇಕಿತ್ತು. ಹೀಗಾಗಿ ಸಂಪುಟ ಸಭೆಗೆ ನೀತಿ ಸಂಹಿತೆ ಹಾಗೂ ಕಾನೂನು ಸುವ್ಯವಸ್ಥೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಗ್ರಾಪಂ ಉಪ ಚುನಾವಣೆ ಮುಂದೂಡಲಾಗಿದೆ.