ಕೊಪ್ಪಳ: ಪೊಲೀಸ್ ಆಗಬೇಕನ್ನುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್ (G Parameshwar), ರಾಜ್ಯಾದ್ಯಂತ ಖಾಲಿ ಇರುವ 8 ಸಾವಿರ ಪೊಲೀಸ್ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ಇದ್ದ ಸರ್ಕಾರವು ಯಾವುದೇ ಹುದ್ದೆಗಳನ್ನು ಭರ್ತಿ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಿಬ್ಬಂದಿ ಕೊರತೆಯಾಗಿದೆ. ಹಿಂದೆ ಇದದ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣದಿಂದ ಯಾವುದೇ ಪಿಎಸ್ಐ ನೇಮಕಾತಿ ಪ್ರಕ್ರಿಯೆ ನಡೆಯಲಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿ, ಈಗಾಗಲೇ 500 ಪಿಎಸ್ಐ (PSI) ಹುದ್ದೆಗೆ ನೇಮಕಾತಿ ಮಾಡಿದೆ. ಇನ್ನೂ 500 ಹುದ್ದೆಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದಿದ್ದಾರೆ.