ನವದೆಹಲಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೋರ್ಟ್ ನಲ್ಲಿ ಜಯ ಸಿಕ್ಕಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಅನುಮತಿ ನೀಡಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಕ್ಕೆ ಏಳು ದಿನಗಳಲ್ಲಿ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.
ಹಲವು ಕಾರಣ ನೀಡಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂಕೋರ್ಟ್ ಆದೇಶ ಹೊರಬರುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಯತ್ನಾಳ್, ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ಧಿಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಮುಂದಿನ ಏಳು ದಿನದ ಒಳಗಾಗಿ ಕಬ್ಬು ಅರೆಯಲು ಅನುವಾಗುವಂತೆ, ಸೂಕ್ತ ಆದೇಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬರೆದುಕೊಂಡಿದ್ದಾರೆ.