ಕಾಂಗೋ : ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿದ್ದರಿಂದ ಕಾರ್ಮಿಕರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವರ್ಷ ದೇಶದಲ್ಲಿ ಸಂಭವಿಸಿದ ಅತ್ಯಂತ ಭೀಕರ ಗಣಿಗಾರಿಕೆ ವಿಪತ್ತುಗಳಲ್ಲಿ ಇದು ಒಂದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ ಪ್ರಾಂತ್ಯದ ಕಲಾಂಡೋ ಗಣಿಗಾರಿಕೆ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ. ಕಾಂಗೋದ ಕುಶಲಕರ್ಮಿ ಗಣಿಗಾರಿಕೆ ಸಂಸ್ಥೆ ಪ್ರಕಾರ, ಆ ಪ್ರದೇಶವನ್ನು ಕಾವಲು ಕಾಯುತ್ತಿದ್ದ ಮಿಲಿಟರಿ ಸಿಬ್ಬಂದಿ ಗುಂಡು ಹಾರಿಸಿದ್ದರು.
ಈ ವೇಳೆ ಗುಂಡಿನ ಸದ್ದಿಗೆ ಹೆದರಿ, ಕಾರ್ಮಿಕರು ಸ್ಥಳದಿಂದ ಹೊರಬರಲು ಸಾಮಾನ್ಯವಾಗಿ ಬಳಸಲಾಗುವ ಕಿರಿದಾದ ಸೇತುವೆಯತ್ತ ಏಕಾಏಕಿ ಧಾವಿಸಿದ್ದಾರೆ. ಓಡಿ ಹೋಗುತ್ತಿದ್ದ ಜನಸಮೂಹದ ಹಠಾತ್ ಒತ್ತಡದಿಂದ ಸೇತುವೆ ಕುಸಿದುಬಿದ್ದಿದ್ದು, 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಘಟನೆಯಲ್ಲಿ 20ಕ್ಕೂ ಹೆಚ್ಚು ಗಣಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ರಾಜಸ್ಥಾನ್ ರಾಯಲ್ಸ್ಗೆ ಮತ್ತೆ ಹೆಡ್ ಕೋಚ್ ಆಗಿ ಕುಮಾರ ಸಂಗಕ್ಕಾರ ನೇಮಕ!



















