ಬೀದರ್: ನಗರದಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾದ ದರೋಡೆಕೋರನಿಗೆ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
ಏಪ್ರಿಲ್ 26ರಂದು ಬೀದರ್ನ ಓಲ್ಡ್ ಆದರ್ಶ ಕಾಲೋನಿಯ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಮಾರಕಾಸ್ತ್ರ ತೋರಿಸಿ ಸುಮಾರು 280 ಗ್ರಾಂ ಚಿನ್ನಾಭರಣವನ್ನು ದರೋಡೆಕೋರರು ದೋಚಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐದು ಆರೋಪಿಗಳ ಪೈಕಿ ಮೂವರನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಸಹೋದರರಾದ ಕರ್ತಾರ್ ಸಿಂಗ್, ಜಗದೀತ್ ಸಿಂಗ್ ಹಾಗೂ ಅಕ್ಷಯ್ ಎಂಬ ಮೂವರು ಬಂಧಿತ ಆರೋಪಿಗಳಾಗಿದ್ದಾರೆ. ಹೊನ್ನಿಕೇರಿ ಬಳಿ ಆರೋಪಿಗಳನ್ನು ಬಂಧಿಸಲು ಹೋದಾಗ ದರೋಡೆಕೋರರು, ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾರೆ ಆತ್ಮ ರಕ್ಷಣೆಗಾಗಿ ಬೀದರ್ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಜಿ.ಎಸ್.ಬಿರಾದಾರರವರು ಕರ್ತಾರಸಿಂಗ್ ಎಂಬ ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಈ ಕಾರ್ಯಚರಣೆಯಲ್ಲಿ ಗ್ರಾಮೀಣ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮಕ್ಸೂದ್ಗೆ ಭುಜಕ್ಕೆ ಗಾಯ ಆಗಿದ್ದು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.