ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ತೆಲುಗಿನ ಹುನುಮಾನ್ ಚಿತ್ರದ ನಾಯಕಿ ಅಮೃತ ಅಯ್ಯರ್ ಜೊತೆಯಾಗಲಿದ್ದಾರೆ. ಈ ಚಿತ್ರದ ಮೂಲಕ ಅಮೃತ ಅಯ್ಯರ್ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ.
SNT ಎಂಟರ್ಪ್ರೈಸಸ್ ಈ ಚಿತ್ರ ನಿರ್ಮಾಣದ ಹೊಣೆ ಹೊತ್ತಿದೆ. “ಲವ್ ಇನ್ ಮಂಡ್ಯ” ಚಿತ್ರದ ನಿರ್ದೇಶಕ ಅರಸು ಅಂತಾರೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಕೌಟುಂಬಿಕ ಕಥಾಹಂದರ ಹೊಂದಿದೆ. ಅರಸು ಅಂತಾರೆ ಯವರ ಚಿತ್ರಕಥೆಗೆ ಮಹೇಶ್ ದೇವ್ ಡಿ ಎನ್ ಪುರ ಹಾಗೂ ಸಂಭಾಷಣೆಗೆ ಕ್ರಾಂತಿ ಕುಮಾರ್ ಹಾಗೂ ಶೈಲೇಶ್ ಕುಮಾರ್ ಸಾಥ್ ನೀಡಿದ್ದಾರೆ.

ಸುಜ್ಞಾನ್ ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ, ವಿಜಯ್ ರಾಕೇಶ್ ಕಶ್ಯಪ್ ಮತ್ತು ಕೀರ್ತಿ ಕೃಷ್ಣಪ್ಪ ಅವರ ಸಹ ನಿರ್ದೇಶನವಿರುವ ಈ ನೂತನ ಚಿತ್ರಕ್ಕೆ ರಮೇಶ್ ಅವರ ನಿರ್ಮಾಣ ನಿರ್ವಹಣೆ ಇದೆ.
ಏ. 6ರಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಏಪ್ರಿಲ್ 7 ರಿಂದ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕರು ಹೇಳಿದ್ದಾರೆ.