ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್ ಯೋಜನೆಯ ಹಣ ದುರ್ಬಳಕೆಯಾಗಿರುವ ಆರೋಪವೊಂದು ಕೇಳಿ ಬಂದಿದೆ.
17 ಸಾವಿರ ಕೋಟಿ ರೂ. ಮೊತ್ತದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಈಗ ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿದೆ. ಸಚಿವ ಭೈರತಿ ಸುರೇಶ್, ರಹೀಂ ಖಾನ್ ಮತ್ತು ಶಾಸಕ ವಿನಯ್ ಕುಲಕರ್ಣಿ ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಹೀಗಾಗಿ ಸಚಿವ ಭೈರತಿ ಸುರೇಶ್, ರಹೀಂ ಖಾನ್ ಮತ್ತು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಲೋಕಾಯುಕ್ತ ಮತ್ತು ED ಯಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅಲ್ಲದೇ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWS & DB) ಯ ಮುಖ್ಯ ಇಂಜಿನಿಯರ್ V. L. ಚಂದ್ರಪ್ಪ ಮತ್ತು T. N. ಮುದ್ದು ರಾಜಣ್ಣ, “ಪೌರಾಡಳಿತ ಇಲಾಖೆ” (DMA) ಯ ನಿರ್ದೇಶಕ ಪ್ರಭುಲಿಂಗ ಕಾವಲಿಕಟ್ಟಿ ವಿರುದ್ಧವೂ ಈ ಆರೋಪ ಕೇಳಿ ಬಂದಿದೆ. ಕೇಂದ್ರ ಸರ್ಕಾರ ಅನುದಾನವನ್ನು ತಮಗಿಷ್ಟ ಬಮದಂತೆ ಉಪಯೋಗಿಸಿದ್ದಾರೆಂಬ ಆರೋಪ ಮಾಡಿ ಲೋಕಾಯುಕ್ತಕ್ಕೆ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.