ಬೆಂಗಳೂರು: ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಶಾಕ್ ಕೊಟ್ಟಿದ್ದು, ಸರ್ಕಾರದ ವಿರುದ್ಧ ಮೂರು ಪ್ರಮುಖ ಅಸ್ತ್ರಗಳನ್ನು ಬಳಕೆ ಮಾಡಿಕೊಂಡು ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದೆ.
ಜನಾಕ್ರೋಶ ಯಾತ್ರೆಯು ಬಿ.ವೈ. ವಿಜಯೇಂದ್ರರ ನೇತೃತ್ವದಲ್ಲಿ ನಡೆಯುತ್ತಿದ್ದು, ಜನರಿಂದ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಈಗ ವಿಜಯೇಂದ್ರರ ಈ ಜನಾಕ್ರೋಶ ಯಾತ್ರೆ ವಿಜಯ ಯಾತ್ರೆಯಾಗಿ ಪರಿವರ್ತನೆ ಹೊಂದುತ್ತಿದೆ ಎಂದೇ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಮಾತಾಗಿದೆ.
ದಲಿತ ಸಮುದಾಯಕ್ಕೆ ಮೀಸಲಿಟ್ಟ ಎಸ್ ಸಿಪಿ ಹಾಗೂ ಟಿಎಸ್ ಪಿ ಅನುದಾನ ಬೇರೆಡೆಗೆ ವರ್ಗಾವಣೆ. ಜನಸಾಮಾನ್ಯರಿಗೆ ದಿನನಿತ್ಯ ಬಳಕೆ ಮಾಡುವ ವಸ್ತುಗಳ ಪೈಕಿ ಶೇ. 50ಕ್ಕೂ ಹೆಚ್ಚು ವಸ್ತುಗಳ ಮೇಲೆ ಬೆಲೆ ಏರಿಕೆ. ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಸೇರಿದಂತೆ ಮೂರು ಪ್ರಮುಖ ಅಸ್ತ್ರಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಲು ಜನಾಕ್ರೋಶ ಯಾತ್ರೆಯನ್ನು ವಿಜಯೇಂದ್ರ ಆರಂಭಿಸಿದ್ದಾರೆ.
ವಿಜಯೇಂದ್ರರ ಜನಾಕ್ರೋಶ ಯಾತ್ರೆಗೆ ಉತ್ತಮ ರೆಸ್ಪಾನ್ ಸಿಗುತ್ತಿದೆ. ಯಾತ್ರೆಗೆ ಭರ್ಜರಿ ರೆಸ್ಪಾನ್ ಸಿಕ್ಕ ಬೆನ್ನಲ್ಲೇ, ಸಮಾರೋಪ ಸಮಾರಂಭ ಮಾಡಲು ತೆರೆಮರೆಯಲ್ಲಿ ಬಿಜೆಪಿ ಪ್ಲಾನ್ ಮಾಡಿದೆ. ಸಮಾರೋಪ ಸಮಾರಂಭಕ್ಕೆ ಕೇಂದ್ರದ ಸಚಿವರೊಬ್ಬರನ್ನು ಕರೆಯಿಸಿ, ಕಾರ್ಯಕ್ರಮ ಮಾಡಲು ತಯಾರಿ ನಡೆಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಯಾವ ಭಾಗದಲ್ಲಿ ಸಮಾರೋಪ ಸಮಾರಂಭ ಮಾಡುವುದು ಎಂದು ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಜನಾಕ್ರೋಶ ಯಾತ್ರೆಯ ಸಮಾರೋಪದ ದಿನಾಂಕ ಹಾಗೂ ಸ್ಥಳ ನಿಗದಿ ಮಾಡಲು ನಿರ್ಧಾರ ಮಾಡಲಾಗಿದೆ.