ಬೆಳಗಾವಿ: ತಹಸೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಣ್ಣ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರುದ್ರಣ್ಣ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿ ಅವರು ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ಎಲ್ಲಮ್ಮ ಆಡಳಿತ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ನೀಡಿದ್ದರು.
ವರ್ಗಾವಣೆ ರದ್ದುಗೊಳಿಸುವಂತೆ ತಹಶೀಲ್ದಾರ್ ಹಾಗೂ ಡಿಸಿ ಮೊಹಮ್ಮದ್ ರೋಷನ್ ಅವರಿಗೆ ರುದ್ರಣ್ಣ ಮನವಿ ಮಾಡಿದ್ದರು. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಚೇರಿಗೂ ಹೋಗಿ ಮನವಿ ಮಾಡಿದ್ದರು ಎನ್ನಲಾಗಿದೆ.
ನಾನು ಜೀವ ಕಳೆದುಕೊಂಡರೆ ಅದಕ್ಕೆ ತಹಶೀಲ್ದಾರ್ ಹಾಗೂ ಡಿಸಿ ಕಾರಣ ಎಂದು ಡಿಪಾರ್ಟ್ಮೆಂಟ್ ವಾಟ್ಸಪ್ ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಈಗ ಘಟನೆಯ ನಂತರ ಪೋಸ್ಟ್ ಡಿಲೀಟ್ ಆಗಿದೆ ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ರೊಹಬ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.