ಮಂಡ್ಯ: ಟಿಪ್ಪರ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ನಡೆದಿದ್ದು, ಟೀ ಹೋಟೆಲ್ ಹಾಗೂ ಜನರು ಜಸ್ಟ್ ಮಿಸ್ ಆಗಿದ್ದಾರೆ.
ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಬಳಿ ಈ ಘಟನೆ ನಡೆದಿದೆ. ಮೈ-ಬೆಂ ಹೈವೆಯ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಟಿಪ್ಪರ್ ಟಿ.ಎಂ.ಹೊಸೂರಿಗೆ ಹೋಗಲು ಅಂಡರ್ ಪಾಸ್ ನಲ್ಲಿ ಬರುತ್ತಿದ್ದ ಮತ್ತೊಂದು ಟಿಪ್ಪರ್ ಡಿಕ್ಕಿಯಾಗಿದೆ.
ಈ ಘಟನೆಯಲ್ಲಿ ಒಂದು ಟಿಪ್ಪರ್ ಟೀ ಅಂಗಡಿಗೆ ನುಗ್ಗಿದೆ. ಅದೃಷ್ಟವಶಾತ್ ಹೋಟೆಲ್ ಹಾಗೂ ಅಲ್ಲಿದ್ದ ಹತ್ತಾರು ಜನರು ಜಸ್ಟ್ ಮಿಸ್ ಆಗಿದ್ದಾರೆ. ಟಿಪ್ಪರ್ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವೈಜ್ಞಾನಿಕ ಹಂಪ್ಸ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಹಿಂದೆ ಕೂಡ ಇದೇ ಸ್ಥಳದಲ್ಲಿ ಸಾಕಷ್ಟು ಅಪಘಾತಗಳು ನಡೆದಿವೆ ಎನ್ನಲಾಗಿದೆ. ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .