ರಾಮನಗರ: ಶಬರಿಮಲೆ (Sabarimala) ಅಯ್ಯಪ್ಪನ ದರ್ಶನ ಪಡೆದು ಬೆಟ್ಟ ಇಳಿದು ಮರಳಿ ಬರುತ್ತಿದ್ದ ವೇಳೆ ಮಾಲಾಧಾರಿಯೊಬ್ಬರು ಹೃದಯಾಘಾತ(Heart Attack)ಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಕನಕಪುರ (Kanakapur) ಮೂಲದ 18 ವರ್ಷದ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಪ್ರಜ್ವಲ್ (18) ಹೃದಯಾಘಾತಕ್ಕೆ ಬಲಿಯಾದ ಮಾಲಾಧಾರಿ. ಪ್ರಜ್ವಲ್ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಇವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು.
ಕಳೆದ ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಬೆಟ್ಟ ಇಳಿಯುತ್ತಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಬರಿಮಲೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.