ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಬಂಡಾಯದ ಬಿಸಿ ತಟ್ಟಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಟಿಕೆಟ್ ತಪ್ಪಿಸಿರುವುದಕ್ಕೆ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕ್ಷೇತ್ರದ ಉಪಸಮರಕ್ಕೂ ಮುನ್ನವೇ ರಾಜಕೀಯ ವಲಯದಲ್ಲಿ ಬಿರುಗಾಳಿ ಎದ್ದಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ 20 ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು, ಯುವನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖಂಡರು ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸುವುದಾಗಿ ಪಣ ತೊಟ್ಟಿದ್ದಾರೆ.
ಇನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ದಾವಣಗೆರೆಯ ಅಖ್ತಾರ್ ರಾಜ್ ಸರ್ಕಲ್ನಲ್ಲಿ ಸಾವಿರಾರು ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಸಾಕಷ್ಟು ಮನವಿ ಮಾಡಿದ್ರು ನಮ್ಮ ಮನವಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಕೇವಲ ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯ ಡಿಕೆಶಿ ವಿರುದ್ದ ಧಿಕ್ಕಾರ ಕೂಗಿದರು.
ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಎ.ಎಸ್ ಮಲ್ಲಿಕಾರ್ಜುನ್ ಎಲ್ಲಾರು ಈಗ ಸಿಟ್ಟಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಬಂಡಾಯ ಎಲ್ಲಾ ಶಮನವಾಗುತ್ತೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಶಕಗಳಿಂದ ಕಾಂಗ್ರೆಸ್ನ ಶಕ್ತಿಯಾಗಿದ್ದ ಮುಸ್ಲಿಂ ಮತದಾರರು ಈಗ ಕೈ ಬಿಟ್ಟರೆ, ಸಮರ್ಥ್ ಹಾದಿ ಸುಗಮವಾಗಿರುವುದಿಲ್ಲ. ಅಸಮಾಧಾನಿತರನ್ನ ಶಾಂತಗೊಳಿಸಲು ಸಚಿವ ಮಲ್ಲಿಕಾರ್ಜುನ್ ಮುಂದಾಗ್ತಾರಾ ಅಥವಾ ಈ ಬಂಡಾಯ ಕಾಂಗ್ರೆಸ್ ಕೋಟೆಯನ್ನು ಧೂಳೀಪಟ ಮಾಡುತ್ತಾ ಎನ್ನುವುದು ಕಾದು ನೋಡಬೇಕಿದೆ.
ಇದನ್ನೂ ಓದಿ : ಮೇಟಿ ಕುಟುಂಬದಲ್ಲಿ ಒಗ್ಗಟ್ಟಿನ ಮಂತ್ರ : ಇನ್ನೇನಿದ್ರೂ ಜನರ ಆಶೀರ್ವಾದ!



















