ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಿಗೆ ಇಂದಿನಿಂದ ಮಳೆಯಾಗುವ ಸಾಧ್ಯತೆ ಇದೆ. ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜೂನ್ 8 ರಿಂದ ಜೂನ್ 13 ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ 5 ದಿನ ಎಲ್ಲ ಜಿಲ್ಲೆಗಳ ಜನರು ಮಳೆಗೆ ಸಿದ್ಧವಾಗಬೇಕಿದೆ.
ಜೂನ್ 8 ರಂದು ವ್ಯಾಪಕ ಮಳೆ, ಜೂನ್ 9 ರಿಂದ 13 ರವರೆಗೆ ತಿವ್ರವಾಗಿ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಕೂಡ ಜೂ. 9ರಿಂದ 13ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ರಾಜ್ಯದ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಆದರೆ, ಯಾವುದೇ ಅಲರ್ಟ್ ಇಲ್ಲ. ಟ್ರಫ್ ನಿರ್ಮಾಣ ಆಗಿರುವುದರಿಂದ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 9 ರಿಂದ 13 ರವರೆಗೆ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹೊರತುಪಡಿಸಿ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.