ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನ – ಜೀವನ ಅಸ್ತವ್ಯಸ್ಥವಾಗುತ್ತಿದೆ.
ಧಾರಾಕಾರ ಮಳೆಗೆ ಗೋಡೆ ಕುಸಿದು ನೀರು ನುಗ್ಗಿರುವ ಘಟನೆ ನಡೆದಿದೆ. ಮಂಗಳೂರಿನ ಕಂಕನಾಡಿಯ ಸುವರ್ಣ ಲೇನ್ ಬಳಿ ಈ ಘಟನೆ ನಡೆದಿದೆ. ಈ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಂಪೌಂಡ್ ಕುಸಿದು ರಸ್ತೆ ಮೇಲೆಯೇ ಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆವರಣ ಗೋಡೆ ರಸ್ತೆ ಮೇಲೆ ಕುಸಿದಿದ್ದರಿಂದಾಗಿ ಎದರು ಬದಿಯ ಕಂಪೌಂಡ್ ಗೂ ಹಾನಿಯಾಗಿದೆ. ಕಂಪೌಂಡ್ ಬಿದ್ದ ರಭಸಕ್ಕೆ ಕಾಪೌಂಡ್ ಗೆ ಅಳವಡಿಸಿದ್ದ ಗೇಟ್ ಮುರಿದು ಬಿದ್ದಿದೆ. ಈ ಘಟನೆಯಿಂದಿಗಾ ವಿದ್ಯುತ್ ಕಂಬ ನೆಲಕ್ಕೆ ಉರುಳಿ ಶಾರ್ಟ್ ಸರ್ಕ್ಯೂಟ್ ಕೂಡ ಉಂಟಾಗಿದೆ.