ಚಿಕ್ಕಮಗಳೂರು: ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರ್ಭಟ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಸಮೀಪ ಅವಾಂತರ ಸೃಷ್ಟಿಯಾಗಿದೆ.
ಭಾರೀ ಗಾಳಿ ಮಳೆಗೆ ಬೃಹತ್ ಮರೊಂದು ರಸ್ತೆ ಮಧ್ಯೆ ಉರುಳಿ ಬಿದ್ದ ಪರಿಣಾಮ, ಕಡೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕೆಲಕಾಲ ಸ್ಥಗಿತಗೊಂಡಿತು. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳೂ ಮುರಿದು ಬಿದ್ದಿದ್ದು, ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ರಸ್ತೆ ಮೇಲಿದ್ದ ಮರ ತೆರವು ಕಾರ್ಯ ಕೈಗೊಂಡಿದ್ದಾರೆ. ವಾಹನ ಸಂಚಾರ ಪುನಃ ಆರಂಭಿಸಲು ಕ್ರಮ ಮುಂದುವರಿದಿದೆ.
ಇದನ್ನೂ ಓದಿ : ಪ್ರೀತಿಯ ವಿಚಾರಕ್ಕೆ 2 ಕುಟುಂಬಗಳ ನಡುವೆ ಗಲಾಟೆ.. ಪೊಲೀಸ್ ಠಾಣೆಯಲ್ಲೇ ರಣರಂಗ


















