ಹಾವೇರಿ | ಜಿಲ್ಲೆಯ ರಾಣೇಬೆನ್ನೂರು ಪಟ್ಟಣದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ವಿದ್ಯುತ್ ಕಂಬಗಳು ಹಾಗೂ ಮರಗಳು ನೆಲಕ್ಕುರುಳಿದ ಘಟನೆ ನಡೆದಿದೆ. ಗೌರಿಶಂಕರ ನಗರದಲ್ಲಿ ಈ ಅವಾಂತರ ಸಂಭವಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ರಸ್ತೆ ಮೇಲೆ ಬಿದ್ದ ವಿದ್ಯುತ್ ಕಂಬಗಳು ಮತ್ತು ಮರಗಳಿಂದ ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದೆ. ನಗರದ ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸ್ಥಳಕ್ಕೆ ತಕ್ಷಣ ಧಾವಿಸಿದ ಹೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಆರಂಭಿಸಿದ್ದು, ಬಿದ್ದಿರುವ ವಿದ್ಯುತ್ ತಂತಿಗಳ ಹತ್ತಿರ ಹೋಗಬೇಡಿ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಆರ್ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?



















