ರಾಯಚೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಹೋಮ್ ಗಾರ್ಡ್ ಕಮಾಂಡರ್ ಬಿದ್ದಿರುವ ಘಟನೆ ನಡೆದಿದೆ.
ಹೋಮ್ ಗಾರ್ಡ್ ಕಮಾಂಡರ್ ಜಂಬಣ್ಣ ಬಲೆಗೆ ಬಿದ್ದಿರುವ ಅಧಿಕಾರಿ. ಮಹಿಳಾ ಪೊಲೀಸ್ ಠಾಣೆಗೆ ಡ್ಯೂಟಿ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಹೋಮ್ ಗಾರ್ಡ್ ವೊಬ್ಬರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ವಶಕ್ಕೆ ಪಡೆದಿದ್ದಾರೆ.
ರಾಯಚೂರು ಲೋಕಾಯುಕ್ತ ಎಸ್ಪಿ ಸತೀಶ್ ಎಸ್.ಚಿಟ್ಟಗುಪ್ತ ನೇತೃತ್ವದಲ್ಲಿ ದಾಳಿ ನಡೆದಿತ್ತು. ಈ ಕುರಿತು ಹೋಮ್ ಗಾರ್ಡ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 5 ಸಾವಿರ ರೂ. ಹಣ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ಮಾಡಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.