ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಹಳೇಹಟ್ಟಿ ಗ್ರಾಮದಲ್ಲಿ ಜೇನುಹುಳ ದಾಳಿ ಮಾಡಿದ್ದು, ಯಮನಂತೆ ಬಂದು ಅನ್ನದಾತನನ್ನೇ ಬಲಿ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ರೈತ ಕರಿಯಾನಾಯ್ಕ್ ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಏಕಾಏಕಿ ಜೇನುಹುಳು ದಾಳಿ ನಡೆಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೈತ. ನಂತರ ಸ್ಥಳೀಯರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.
ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಮೃತ ರೈತ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿಗೆ ಸೇರಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : 7ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆಗೈದ ಶಿಕ್ಷಕ ಸಸ್ಪೆಂಡ್!



















