ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರೊಂದು ಜೆಸಿಬಿಗೆ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಬೇರ್ಪಟ್ಟ ಘಟನೆ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಮೃತ ವ್ಯಕ್ತಿ.
ಜೆಸಿಬಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಕೆಳಗೆ ಬಾಗಿ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ರುಂಡವು ದೇಹದಿಂದ ಸಂಪೂರ್ಣವಾಗಿ ಕತ್ತರಿಸಿ, ಕಾರಿನ ಮುಂಭಾಗದ ಬಾನೆಟ್ನೊಳಗೆ ಹೋಗಿ ಸಿಲುಕಿದೆ. ಘಟನಾ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?


















