ಬೆಂಗಳೂರು: ವರದಕ್ಷಿಣೆ ಕಿರುಕುಳ ಹಿನ್ನೆಲೆ ಗೃಹಿಣಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಜೆಪಿ ನಗರದ ಆವಲಹಳ್ಳಿಯಲ್ಲಿ ಶನಿವಾರ(ಅ.4) ನಡೆದಿದೆ.,
ನವ್ಯ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.
ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಪತಿ ಶೈಲೇಶ್, ನಾಲ್ಕು ವರ್ಷಗಳ ಹಿಂದೆಯಷ್ಟೇ ಅದ್ದೂರಿ ವಿವಾಹವಾಗಿದ್ದರು. ಮೊದಲು ಚೆನ್ನಾಗಿದ್ದ ದಾಂಪತ್ಯ ಬರುಬರುತ್ತಾ ವರದಕ್ಷಿಣೆ ವಿಚಾರವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ. ಮನೆಯಲ್ಲಿ ಪತ್ನಿ ನವ್ಯಗೆ ಪತಿ, ಹಾಗೂ ಅವರ ಮನೆಯವರು ದಿನನಿತ್ಯ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಲಾಗಿದೆ. ಕಿರುಕುಳದಿಂದ ಬೇಸತ್ತು ನವ್ಯ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ನವ್ಯ ಅವರ ಸಂಬಂಧಿಕರು ಶೈಲೇಶ್ ಮತ್ತು ಅವರ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಆರೋಪ ಮಾಡಿದ್ದಾರೆ. ಮಗಳು ಆತ್ಮ೧ಹತ್ಯೆ ಮಾಡಿಕೊಳ್ಳುವವಳಲ್ಲ. ವರದಕ್ಷಿಣೆ ಕಿರುಕುಳ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.