ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಶಸ್ತ್ರ ಕೈಯ್ಯಲ್ಲಿದ್ದರೂ ಬಳಸೋ ಹಾಗಿಲ್ಲ: ಬಾಲಕೋಟ್ ದಾಳಿ ವೇಳೆ ಎಫ್-16 ಯುದ್ಧ ವಿಮಾನ ಬಳಸಿ ಬೈಸಿಕೊಂಡಿದ್ದ ಪಾಕ್‌ಗೆ ಮತ್ತೆ ಅತಂತ್ರ ಸ್ಥಿತಿ!

May 10, 2025
Share on WhatsappShare on FacebookShare on Twitter

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ದೀರ್ಘಕಾಲೀನ ಸಂಘರ್ಷದ ಇತಿಹಾಸದಲ್ಲಿ 2019ರ ಬಾಲಾಕೋಟ್ ವೈಮಾನಿಕ ದಾಳಿ ಮತ್ತು 2025ರ ‘ಆಪರೇಷನ್ ಸಿಂದೂರ’ ನಿರ್ಣಾಯಕ ಘಟನೆಗಳು. ಈ ಎರಡೂ ಸಂದರ್ಭಗಳಲ್ಲಿ, ಭಾರತವು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿಕೊಂಡೇ ದಾಳಿಗಳನ್ನು ನಡೆಸಿದೆ. ಈ ಘಟನೆಗಳ ನಂತರ ಪಾಕಿಸ್ತಾನದ ಪ್ರತಿಕ್ರಿಯೆಗಳು ಮತ್ತು ಅದಕ್ಕೆ ಅಮೆರಿಕ (ಯುಎಸ್) ನೀಡಿದ ಎಚ್ಚರಿಕೆಗಳು ಭದ್ರತಾ ಸನ್ನಿವೇಶದ ಸಂಕೀರ್ಣತೆಯನ್ನು ಹೆಚ್ಚಿಸಿವೆ. ವಿಶೇಷವಾಗಿ ಯುಎಸ್‌ನಿಂದ ಒದಗಿಸಲಾದ ಎಫ್-16 ಜೆಟ್‌ಗಳ ಬಳಕೆ ಮತ್ತು ಅವುಗಳ ಗೌರವಕ್ಕೆ ಕುಂದು ತಂದಿರುವ ಪಾಕಿಸ್ತಾನದ ನಡೆಯು ಮತ್ತೆ ಚರ್ಚೆಗೆ ಬಂದಿದೆ. ಯಾಕೆಂದರೆ ಅನುಮತಿ ಇಲ್ಲದೇ ಈ ಹಿಂದೆ ಎಫ್-16 ವಿಮಾನ ಬಳಸಿದ್ದ ಪಾಕಿಸ್ತಾನ ಭಾರತದ ಕ್ಷಿಪಣಿಯೇಟಿಗೆ ಮಕಾಡೆ ಮಲಗಿತ್ತು. ಇದೀಗ ಮತ್ತೆ ಎಫ್-16 ಬಳಸಲು ಮಾತನಾಡಿದ ಅಮೆರಿಕದಿಂದ ಬೈಸಿಕೊಳ್ಳುವುದಕ್ಕೆ ಸಜ್ಜಾಗಿದೆ.

2019ರ ಬಾಲಾಕೋಟ್ ದಾಳಿ ಮತ್ತು ಎಫ್-16 ವಿವಾದ
2019ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜೈಷ್-ಎ-ಮೊಹಮ್ಮದ್ (JeM) ನಡೆಸಿದ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾದರು. ಇದಕ್ಕೆ ಪ್ರತೀಕಾರವಾಗಿ, ಭಾರತೀಯ ವಾಯುಪಡೆಯು ಫೆಬ್ರವರಿ 26, 2019 ರಂದು ಪಾಕಿಸ್ತಾನದ ಖೈಬರ್ ಪಖ್ತೂಂಖ್ವಾ ಪ್ರಾಂತ್ಯದ ಬಾಲಾಕೋಟ್‌ನಲ್ಲಿರುವ ಜೈಶ್ ತರಬೇತಿ ಶಿಬಿರದ ಮೇಲೆ ವಾಯು ದಾಳಿ ನಡೆಸಿತು. ಈ ‘ಸರ್ಜಿಕಲ್ ಸ್ಟ್ರೈಕ್’ ಭಯೋತ್ಪಾದಕ ಮೂಲಸೌಕರ್ಯಕ್ಕೆ ಹಾನಿ ಉಂಟುಮಾಡುವ ಉದ್ದೇಶ ಹೊಂದಿತ್ತು.

ಮಾರನೆಯ ದಿನ, ಫೆಬ್ರವರಿ 27, 2019 ರಂದು, ಪಾಕಿಸ್ತಾನ ವಾಯುಪಡೆಯು (PAF) ಭಾರತದ ಸೇನಾ ಮೂಲ ಸೌಕರ್ಯಗಳನ್ನು ಗುರಿಯಾಗಿಸಲು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಲು ಪ್ರಯತ್ನಿಸಿತ್ತು. ಈ ವೈಮಾನಿಕ ಕಾದಾಟದ ಸಂದರ್ಭದಲ್ಲಿ, ಭಾರತೀಯ ವಾಯುಪಡೆಯ ಮಿಗ್-21 ವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರು ಪಾಕ್ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಆದರೆ, ಪಾಕಿಸ್ತಾನವು ತಾನು ಯಾವುದೇ ಎಫ್-16 ವಿಮಾನವನ್ನು ಕಳೆದುಕೊಂಡಿಲ್ಲ ಎಂದು ವಾದಿಸಿತ್ತು.

ಈ ಘಟನೆಯು ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿತ್ತು. ಪಾಕಿಸ್ತಾನವನ್ನು ಅಮೆರಿಕ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಮೆರಿಕವು ಎಫ್-16 ಯುದ್ಧ ವಿಮಾನವನ್ನು ಪಾಕಿಸ್ತಾನಕ್ಕೆ ಒದಗಿಸುವಾಗಲೇ, ಅದನ್ನು ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಗಳು ಮತ್ತು ರಕ್ಷಣಾತ್ಮಕ ಉದ್ದೇಶಗಳಿಗಾಗಿ ಮಾತ್ರ ಬಳಸಬೇಕೆಂದು ಒಪ್ಪಂದ ಮಾಡಿಕೊಂಡಿತ್ತು. ಪಾಕಿಸ್ತಾನವು ಈ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಭಾರತ ಆರೋಪಿಸಿತ್ತು. ಅಮೆರಿಕ ರಕ್ಷಣಾ ಇಲಾಖೆಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪಾಕಿಸ್ತಾನಕ್ಕೆ ತನ್ನ ಎಫ್-16 ವಿಮಾನಗಳ ಬಳಕೆಯ ಬಗ್ಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತ್ತು. ಅಲ್ಲದೇ, ಪಾಕಿಸ್ತಾನದ ಹೇಳಿಕೆ ನಿಜವೇ ಸುಳ್ಳೇ ಎಂದು ತಿಳಿಯಲು ಅಮೆರಿಕದ ಅಧಿಕಾರಿಗಳು ಪಾಕಿಸ್ತಾನದ ಎಫ್-16 ವಿಮಾನಗಳ ಸಂಖ್ಯೆಯನ್ನೂ ಲೆಕ್ಕ ಹಾಕಿದ್ದರು. ಇದು ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ತಂದಿತ್ತು.

ಆಪರೇಷನ್ ಸಿಂದೂರದಲ್ಲೂ ಮುಖಭಂಗ
ಈಗ ಅಂದರೆ 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಮತ್ತು 26 ನಾಗರಿಕರ ಹತ್ಯೆಗೆ ಪ್ರತೀಕಾರವಾಗಿ ಮೇ 7ರಂದು ಭಾರತವು ‘ಆಪರೇಷನ್ ಸಿಂದೂರ’ ಎಂಬ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ದಲ್ಲಿರುವ 9 ಉಗ್ರ ಶಿಬಿರಗಳ ಮೇಲೆ ನಿಖರವಾದ ಕ್ಷಿಪಣಿ ದಾಳಿಗಳನ್ನು ನಡೆಸಿತು.

ಈ ದಾಳಿಗಳು ಮುಖ್ಯವಾಗಿ ಲಷ್ಕರ್-ಎ-ತೊಯ್ಬಾ (LeT), ಜೈಷ್-ಎ-ಮೊಹಮ್ಮದ್ (JeM) ಮತ್ತು ಹಿಜ್ಬುಲ್ ಮುಜಾಹಿದೀನ್ (HM) ನಂತಹ ಗುಂಪುಗಳಿಗೆ ಸೇರಿದ ತರಬೇತಿ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡಿದ್ದವು. ಬಹವಲ್ಪುರ್‌ನಲ್ಲಿರುವ ಜೈಶ್ ಮುಖ್ಯ ಕಚೇರಿ ಮತ್ತು ಮುರಿದ್ಕೆಯಲ್ಲಿರುವ ಲಷ್ಕರ್ ಕೇಂದ್ರಸ್ಥಾನವೂ ಧ್ವಂಸಗೊಂಡವು. ಭಾರತವು ಈ ಕಾರ್ಯಾಚರಣೆಯನ್ನು ನಾಗರಿಕರಿಗೆ ಹಾನಿಯಾಗದಂತೆ ಎಚ್ಚರಿಕೆಯಿಂದ ನಡೆಸಿದ “ಗುರಿಯಿಟ್ಟ ಮತ್ತು ಉದ್ದೇಶಿತ” ದಾಳಿ ಎಂದು ಬಣ್ಣಿಸಿತು.

ಪಾಕಿಸ್ತಾನದ ಪ್ರತಿಕ್ರಿಯೆ ಮತ್ತು ಅಮೆರಿಕದ ಒತ್ತಡ
ಆಪರೇಷನ್ ಸಿಂದೂರಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನವು ಭಾರತದ ವಿರುದ್ಧ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿಕೊಂಡು ದೊಡ್ಡ ಪ್ರಮಾಣದ ವೈಮಾನಿಕ ದಾಳಿಗಳನ್ನು ನಡೆಸಲು ಪ್ರಯತ್ನಿಸಿದೆ. ಈ ದಾಳಿಗಳು ಜಮ್ಮು, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನ 26 ಸ್ಥಳಗಳಲ್ಲಿನ ನಾಗರಿಕರು ಮತ್ತು ಸೇನಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡಿದ್ದವು. ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಈ ದಾಳಿಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದೆ. ಈ ಸಂದರ್ಭದಲ್ಲಿ, ಭಾರತೀಯ ವಾಯುಪಡೆಯು ಒಂದು ಎಫ್-16 ಮತ್ತು ಎರಡು ಜೆಎಫ್-17 ಯುದ್ಧ ವಿಮಾನಗಳನ್ನು ಗುಂಡಿಕ್ಕಿ ಕೆಡವಿತು ಎಂದು ಕೆಲವು ವರದಿಗಳು ಹೇಳಿಕೊಂಡಿವೆ. ಆದರೆ, ಪಾಕಿಸ್ತಾನ ಮತ್ತೆ ಅದನ್ನು ನಿರಾಕರಿಸಿದೆ.

ಇದೀಗ ಅಮೆರಿಕ ಮತ್ತೊಮ್ಮೆ ಪಾಕಿಸ್ತಾನಕ್ಕೆ ತೀವ್ರ ಎಚ್ಚರಿಕೆ ನೀಡಿದ್ದು, 2019ರ ತಪ್ಪನ್ನೇ ಮತ್ತೆ ಮಾಡಿದ್ದಕ್ಕೆ ಪಾಕ್ ವಿರುದ್ಧ ಕೆಂಡಾಮಂಡಲವಾಗಿದೆ ಎಂದು ವರದಿಗಳು ಹೇಳಿವೆ. ಕೆಲವು ವರದಿಗಳು ಅಮೆರಿಕ ಅಧಿಕಾರಿಗಳು ಭಾರತದ ‘ಆಪರೇಷನ್ ಸಿಂದೂರ’ವನ್ನು “ನಿಯಂತ್ರಿತ ಮತ್ತು ಜವಾಬ್ದಾರಿಯುತ” ಪ್ರತಿಕ್ರಿಯೆ ಎಂದು ಪರಿಗಣಿಸಿದರೆ, ಪಾಕಿಸ್ತಾನದ ಪ್ರತಿಕ್ರಿಯೆಯನ್ನು “ಆಕ್ರಮಣಕಾರಿ” ಎಂದು ಟೀಕಿಸಿದೆ.

ಅಮೆರಿಕದ ಒತ್ತಡದ ರಾಜತಾಂತ್ರಿಕ ಪರಿಣಾಮ
ಈ ಹಿಂದೆಯೇ ಅಮೆರಿಕದ ಹಸ್ತಕ್ಷೇಪ ಮತ್ತು ಒತ್ತಡವು ಪಾಕಿಸ್ತಾನದ ಮೇಲೆ ಗಮನಾರ್ಹ ರಾಜತಾಂತ್ರಿಕ ಮತ್ತು ಮಿಲಿಟರಿ ಪರಿಣಾಮಗಳನ್ನು ಬೀರಿತ್ತು. 2019ರಲ್ಲಿ, ಅಮೆರಿಕ ನೀಡಿದ ಎಚ್ಚರಿಕೆಯಿಂದಾಗಿ ಪಾಕಿಸ್ತಾನಕ್ಕೆ ಭಾರತದ ವಿರುದ್ಧ ತನ್ನ ವಾಯುಪಡೆಯ ಕಾರ್ಯಾಚರಣೆಗಳನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಈಗಲೂ ಅಮೆರಿಕದ ಒತ್ತಡದಿಂದಾಗಿ ಪಾಕಿಸ್ತಾನಕ್ಕೆ ಯುದ್ಧ ವಿಮಾನಗಳನ್ನು ಬಳಸಲು ಸಾಧ್ಯವಾಗದಂಥ ಸ್ಥಿತಿ ಸೃಷ್ಟಿಸಿದೆ. ಕೈಯ್ಯಲ್ಲಿ ಅಸ್ತ್ರವಿದ್ದರೂ ಬಳಸಲಾಗದೇ ಪಾಕ್ ಅತಂತ್ರವಾಗಿದೆ. ಅಲ್ಲದೇ ಅಮೆರಿಕದ ರಾಜತಾಂತ್ರಿಕ ವಿಶ್ಲೇಷಕರು, ಪಾಕಿಸ್ತಾನವನ್ನು “ಭಯೋತ್ಪಾದನೆಯ ಪ್ರಾಯೋಜಕ ರಾಷ್ಟ್ರ” ಎಂದು ಅಧಿಕೃತವಾಗಿ ಘೋಷಿಸಲು ಒತ್ತಾಯಿಸುತ್ತಿದ್ದಾರೆ. ಇದು ಪಾಕಿಸ್ತಾನದ ಅಂತಾರಾಷ್ಟ್ರೀಯ ಸ್ಥಾನಮಾನಕ್ಕೆ ದೊಡ್ಡ ಸವಾಲನ್ನು ಒಡ್ಡಿದೆ. ಇನ್ನೊಂದೆಡೆ ಅಮೆರಿಕದ ಈ ಹಸ್ತಕ್ಷೇಪವು ಪರಮಾಣು ಶಸ್ತ್ರಾಸ್ತ್ರ ಹೊಂದಿರುವ ಎರಡು ದೇಶಗಳ ನಡುವಿನ ಸಂಘರ್ಷವು ಅನಿಯಂತ್ರಿತವಾಗಿ ಹೆಚ್ಚಾಗುವುದನ್ನು ತಡೆಯುವಲ್ಲಿ ಒಂದು ರೀತಿಯಲ್ಲಿ ಸಂಧಾನಕಾರನ ಪಾತ್ರ ವಹಿಸಿದೆ ಎಂದು ಹೇಳಬಹುದು.

Tags: AIRSTRIKEBalakot strikeF-16IndiaJammu And KashmirOperation sindhooraPahalgam AttackPak india warPakistanTerroristUS schooled
SendShareTweet
Previous Post

India-Pak War: ಐಎನ್ಎಸ್ ವಿಕ್ರಾಂತ್: ಪಾಕ್‌ಗೆ ನೀರಲ್ಲೇ ಬೆವರಿಳಿಸಿದ ಭಾರತದ “ತೇಲುವ ಅಭೇದ್ಯ ಕೋಟೆ”

Next Post

ಪ್ರವಾಸಿಗರಿದ್ದ ಬೋಲ್ಟ್ ಪಲ್ಟಿ!

Related Posts

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ
ವಿಶೇಷ ಅಂಕಣ

“ಶರಾವತಿ”ಯ ಕತ್ತು ಹಿಸುಕುವ ಯೋಜನೆ | ಸರ್ಕಾರದ ನಡೆಗೆ ಪರಿಸರವಾದಿಗಳ ತೀವ್ರ ಆಕ್ಷೇಪ

“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು
ವಿಶೇಷ ಅಂಕಣ

“ಕೈ”ಗೆ ಸಿಕ್ಕ ಹೊಸ ಅಸ್ತ್ರ | ಬಿಜೆಪಿಯ ಮಹಾ ಭ್ರಷ್ಟಾಚಾರ ಬಟಾಬಯಲು

ಕಾಂತರಾಜು ವರದಿ “ಕೈ”ಬಿಟ್ಟು ಮರುಸಮೀಕ್ಷೆಗೆ ರಾಜ್ಯ ಸರ್ಜಾರ ನಿರ್ಧಾರ !
ವಿಶೇಷ ಅಂಕಣ

ಕಾಂತರಾಜು ವರದಿ “ಕೈ”ಬಿಟ್ಟು ಮರು ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ !

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ
ವಿಶೇಷ ಅಂಕಣ

ಉಪ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆ : ಇಲ್ಲಿದೆ ಸಂಪೂರ್ಣ ಮಾಹಿತಿ

Next Post
ಪ್ರವಾಸಿಗರಿದ್ದ ಬೋಲ್ಟ್ ಪಲ್ಟಿ!

ಪ್ರವಾಸಿಗರಿದ್ದ ಬೋಲ್ಟ್ ಪಲ್ಟಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಬ್ರೇಕ್ – ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್! 

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಬ್ರೇಕ್ – ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್! 

Recent News

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಬ್ರೇಕ್ – ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್! 

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಬ್ರೇಕ್ – ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್! 

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat