ಗದಗ: ಬಿರುಗಾಳಿ, ಮಳೆ ಅಬ್ಬರಕ್ಕೆ ಅಪಾರ ಪ್ರಮಾಣದ ಭತ್ತ ನೆಲಕ್ಕೆ ಉರುಳಿರುವ ಘಟನೆ ನಡೆದಿದೆ.
ಮಳೆಯಿಂದಾಗಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಸಂಪೂರ್ಣವಾಗಿ ಹಾನಿಯಾಗಿದೆ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ.
ಎಕರೆಗೆ ಲಕ್ಷಾಂತರ ರೂ. ಖರ್ಚು ಮಾಡಿ ರೈತರು ಬಿತ್ತನೆ ಕಾರ್ಯ ನಡೆಸಿದ್ದರು. ಭತ್ತ ಕೂಡ ಸಮೃದ್ಧವಾಗಿ ಬೆಳೆದಿತ್ತು. ಆದರೆ, ಬೆಳಗಾಗುವುದರಲ್ಲಿ ಭತ್ತ ಸಂಪೂರ್ಣವಾಗಿ ನೆಲದ ಪಾಲಾಗಿದೆ. ಕಟಾವಿಗೆ ಬಂದ ಭತ್ತ ನೆಲಕ್ಕೆ ಉರುಳಿ ಬಿದ್ದಿದ್ದನ್ನು ನೋಡಿ ರೈತರಿಗೆ ದಿಕ್ಕು ತೋಚದಂತಾಗಿದೆ.