ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಇದೇ ವೇಳೆ ತುಮಕೂರು ನಗರದಲ್ಲಿ ಬಿರುಗಾಳಿ ಸಹಿತ ಮಳೆಯಾದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಕುಳಿತಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿ ಪೋಲೀಸರು ಮಾನವೀಯತೆ ಮೆರೆದಿದ್ದಾರೆ.
ಸುಮಾರು 50 ರಿಂದ 60 ಪ್ರತಿಭಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮಳೆ ಜೋರಾದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನಿರ್ಮಿಸಿಕೊಂಡಿದ್ದ ತಾತ್ಕಾಲಿಕ ಶೆಡ್ ನಲ್ಲಿ ಮಳೆ ನೀರು ಸೋರುತ್ತಿತ್ತು. ತಕ್ಷಣ ಸಹಾಯಕ್ಕೆ ಧಾವಿಸಿದ ಪೊಲೀಸ್ ಇಲಾಖೆ, ಪ್ರತಿಭಟನಕಾರರನ್ನು ಬಸ್ ಮೂಲಕ ಪಾಲಿಕೆ ಆವರಣದ ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ಇದೇ ವೇಳೆ ಪೋಸರಿಗೆ ಜಿಲ್ಲಾಡಳಿತ ಕೂಡ ಸಾಥ್ ನೀಡಿದೆ.