ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜೈಲುಪಾಲಾಗಿದ್ದಾರೆ. ತಮ್ಮ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೆಜ್ ಮಾಡಿದ್ದಾನೆ ಎಂಬ ಕಾರಣಕ್ಕೆ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಆರೋಪ ದರ್ಶನ್ ಮೇಲಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಪತ್ನಿ ಪೊಲೀಸ್ ಕಮಿಷನರ್ ಗೆ ಪತ್ರ ಬರೆದಿದ್ದಾರೆ.
ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಿದ್ದ ಸಂದರ್ಭದಲ್ಲಿ ‘ಪವಿತ್ರಾ ಗೌಡ ಅವರು ದರ್ಶನ್ ಪತ್ನಿ’ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿಕೆ ನೀಡಿದ್ದರು. ಹೀಗಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ.

ಸುದ್ದಿಗೋಷ್ಠಿ ಮಾಡುವಾಗ ದರ್ಶನ್ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯಮದರು ಕೂಡ ಅದನ್ನೇ ಹೇಳಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ದಂಪತಿ ಅರೆಸ್ಟ್ ಎಂದು ಸುದ್ದಿ ಮಾಡಿದರು. ಹೀಗಾಗಿ ನಾನು ಮತ್ತು ನನ್ನ ಮಗ ವಿನೀಶ್ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವಂತೆ ಆಗಬಾರದು. ಪವಿತ್ರಾ ಗೌಡಗೆ ಸಂಜಯ್ ಸಿಂಗ್ ಜೊತೆ ಮದುವೆ ಆಗಿತ್ತು. ಅವರಿಂದ ಮಗಳನ್ನೂ ಪಡೆದಿದ್ದಾಳೆ. ಪೊಲೀಸ್ ದಾಖಲೆಗಳಲ್ಲಿ ಈ ಮಾಹಿತಿ ಸ್ಪಷ್ಟವಾಗಿರಲಿ. ಇದರಿಂದ ನನಗೆ ಭವಿಷ್ಯದಲ್ಲಿ ತೊಂದರೆ ಆಗದಿರಲಿ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

‘ನಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ಕಾನೂನು ತನ್ನದೇ ಸಮಯ ತೆಗೆದುಕೊಳ್ಳುತ್ತದೆ ಅಂತ ನಾನು ನಂಬಿದ್ದೇನೆ. ಈ ಕೇಸ್ನ ಮಾಸ್ಟರ್ ಮೈಂಡ್ ಆಗಿರುವ ಪವಿತ್ರಾ ಗೌಡ ವಿಚಾರದಲ್ಲಿ ಮಾಹಿತಿ ಸೂಕ್ತವಾಗಿರಲಿ ಎಂದು ನಾನು ಒತ್ತಾಯಿಸುತ್ತೇನೆ. ಅವಳು ನನ್ನ ಗಂಡನ ಸ್ನೇಹಿತೆ ಎಂಬುದು ನಿಜ. ಆದರೆ ಆಕೆ ನನ್ನ ಗಂಡನ ಪತ್ನಿ ಅಲ್ಲ. ನಾನು ಮಾತ್ರ ದರ್ಶನ್ ಅವರನ್ನು ಕಾನೂನಾತ್ಮಕವಾಗಿ ಮದುವೆ ಆದವಳು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.