ಬಾಗಲಕೋಟೆ : ಸಿಎಂ ಸಿದ್ದರಾಮಯ್ಯ ಎಎಸ್ಪಿ ಮೇಲೆ ಕೈ ಮಾಡಿದ ವಿಚಾರಕ್ಕೆ ಕೂಡಲಸಂಗಮದಲ್ಲಿ ಸಚಿವ ಆರ್ ಬಿ ತಿಮ್ಮಾಪುರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಯ್ ನೀನ್ಯಾಕೆ ಹೀಗೆ ಮಾಡಿದೆ ಅಂದಿರಬೇಕು. ಕೈ ಮಾಡಿದ್ದು ಅವ್ರಿಗೆ ಅಂತಾ ಯಾಕೆ ಹೇಳ್ತೀರಿ. ನೀವು ಕೈ ಮಾಡಿದ್ದಾರೆ ಅಂತಾ ಯಾಕೆ ಅನ್ಕೋತೀರಿ. ಹಿಂದೆ ಯಡಿಯೂರಪ್ಪನವರು ಐಎಎಸ್ ಅಧಿಕಾರಿಗಳ ಮೇಲೆ ಕೈ ಮಾಡಿದ್ದೂ ಗೊತ್ತಿದೆ. ಎಮೋಷನ್ ನಲ್ಲಿ ಮಾಡಿದ್ದರೂ ಮಾಡಿರಬಹುದು. ಹಿಂದೆ ಯಡಿಯೂರಪ್ಪನವರು ಮಾಡಿಲ್ಲ ಅಂತಾ ವಿಜಯೇಂದ್ರ ಅವರು ಹೇಳಲಿ ನೋಡೋಣ ಎಂದು ಹೇಳಿದ್ದಾರೆ.