ಪಿಎಂ ನರೇಂದ್ರ ಮೋದಿ ಸರ್ಕಾರವು ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅದರಲ್ಲೂ ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಮಾತಿನ ಏಟು ಕೊಟ್ಟಿದ್ದಾರೆ.
ಪಿಎಂ ಮೋದಿ ನೇತೃತ್ವದ ಸರ್ಕಾರಕ್ಕೆ ಪ್ರಶ್ನೆ ಮೇಲೆ ಪ್ರಶ್ನೆ ಎಸೆದ ಸಿಎಂ ಸಿದ್ದರಾಮಯ್ಯ, ನೋಟುಗಳ ಅಮಾನ್ಯೀಕರಣ ಮಾಡಿದ್ದರು. ಅದು ಯಾರಿಗೆ ಅನುಕೂಲ ಆಯ್ತು ಅಂತಾ ಪ್ರಶ್ನಿಸಿದ್ದಾರೆ.
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತಾ ಹೇಳಿದ್ದರು. ಕೊಟ್ರಾ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ. ಬಜೆಟ್ನಲ್ಲಿ ತುಂಗಭದ್ರಾ ಯೋಜನೆಗೆ 5 ಸಾವಿರ ಕೋಟಿ ಕೊಡ್ತೀವಿ ಅಂತಾ ಘೊಷಿಸಿದ್ದರು. ಆದರೆ ಹಣ ಕೊಡಲಿಲ್ಲ. ಇದೇ ನರೇಂದ್ರ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಶೇ. 50ರಷ್ಟು ತೆರಿಗೆ ಹಣ ಬರಬೇಕು ಆಂತಾ ಯುಪಿಎ ಸರ್ಕಾರವನ್ನು ಒತ್ತಾಯಿಸಿದ್ದರು.
ಆದರೆ ಅವರು ಈಗ ಮಾಡ್ತಿರುವುದೇನು.? ಹಣಕಾಸು ಆಯೋಗದ ಶಿಫಾರಸ್ಸಿನಂತೆ ನಮಗೆ ಬರಬೇಕಾದ ಹಣವನ್ನೇ ಕೊಡುತ್ತಿಲ್ಲ. ಬರೀ ಸುಳ್ಳು ಹೇಳಿಕೊಂಡೆ ಮೋದಿ ಓಡಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.