ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿ ಶ್ರೀ ವಿದ್ಯಾಗಣಪತಿ ದೇವಾಲಯದ ಗಣೇಶ ಮೂರ್ತಿ ಚಪ್ಪಲಿ ಹಾರ ಹಾಕಿದ್ದಕ್ಕೆ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಬೇಲೂರಿನಲ್ಲಿ ಬೆಳಗಿನಜಾವ ಪುರಸಭೆ ಆವರಣದಲ್ಲಿರುವ ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದಾರೆ. ಕೋಮು ಗಲಭೆ ಸೃಷ್ಟಿ ಮಾಡುವ ಸಂಚಿನ ಭಾಗವಾಗಿಯೇ ದುಷ್ಕರ್ಮಿಗಳು ಚಪ್ಪಲಿ ಹಾರವನ್ನು ಹಾಕಿದ್ದಾರೆ. ಸಜ್ಜನರಿಗೆ ಸಿಟ್ಟು ಬಂದರೆ ದುರ್ಜನರು ಯಾರೂ ಉಳಿಯಲ್ಲವೆಂದು ಕಿಡಿಕಾರಿದ್ದಾರೆ.
ತಪ್ಪು ಮಾಡಿದವನ ಮನೆ ಮೇಲೆ ಬುಲ್ಡೋಜರ್ ಹರಿಸಬೇಕು, ಅವನು ಯಾವುದೇ ಸಮಾಜ, ಧರ್ಮದವನೇ ಆಗಿರಲಿ ಅವನ ಮನೆ ಮೇಲೆ ಸರ್ಕಾರ ಬುಲ್ಡೋಜರ್ ಹರಿಸಬೇಕು ಇಲ್ಲದಿದ್ದರೆ ಹಿಂದೂ ಸಮಾಜವೇ ಬುಲ್ಡೋಜರ್ ಹರಿಸಬೇಕಾಗುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿಯವರು ಆಕ್ರೋಶ ಹೊರಹಾಕಿದ್ದಾರೆ



















