ಬೆಂಗಳೂರು : ಬ್ಯಾಂಕಾಕ್ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಏರ್ಪೋರ್ಟ್ನ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನನ್ನು ಅರೆಸ್ಟ್ ಮಾಡಿದ್ದು, ಲಗೇಜ್ ಪರಿಶೀಲನೆ ವೇಳೆ ಬ್ಯಾಗ್ನಲ್ಲಿ 1 ಸಿಲ್ವರ್ ಗಿಬ್ಬನ್, 2 ಕಪ್ಪು ಶ್ಯಾಂಕ್ಡ್ ಡೌಕ್ಸ್ ಪ್ರಾಣಿಗಳಿರುವುದು ಗೊತ್ತಾಗಿದೆ. ಈ ಎರಡು ಪ್ರಾಣಿಗಳು ಅಳಿವಿನಂಚಿನಲ್ಲಿರುವ ಪ್ರಭೇದಗಳಾಗಿವೆ.
ಸದ್ಯ ವನ್ಯಜೀವಿ ಸಂರಕ್ಷಣಾ ಖಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಯಾಣಿಕನನ್ನು ಹೆಚ್ಚಿನ ವಿಚಾರಣಗೆ ಒಳಪಡಿಸಲಾಗಿದೆ.
ಶಿಕ್ಷೆ ಏನು?
ಅಕ್ರಮವಾಗಿ ಪ್ರಾಣಿ ಸಾಗಾಟ ಮಾಡಿದರೆ ಭಾರತದ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ಇದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುತ್ತೆ. ಸಾಮಾನ್ಯವಾಗಿ ಇಂತಹ ಪ್ರಕರಣದಲ್ಲಿ ಭಾಗಿಯಾಗುವ ಆರೋಪಿಗಳಿಗೆ 3-7 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತೆ. ಕೆಲ ಪ್ರಕರಣಗಳಲ್ಲಿ ಪ್ರಕರಣದ ತೀವ್ರತೆಗೆ ಅನುಸಾರ ದಂಡವನ್ನೂ ಹಾಕಲಾಗುತ್ತೆ. ಅಪರೂಪದ ಅಥವಾ ಸಂರಕ್ಷಿತ ಪ್ರಾಣಿಗಳ ಹತ್ಯೆ/ಸಾಗಾಟಕ್ಕೆ ಕಠೋರ ಶಿಕ್ಷೆ ಇರಲಿದೆ.



















