ಬೆಂಗಳೂರು: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಯಾನಂದ ಸೇರಿದಂತೆ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ನಿರ್ಧಾರ ಕೈ ಬಿಡಬೇಕೆಂದು ಸಿಎಂಗೆ ಪತ್ರ ಬರೆಯಲಾಗಿದೆ.
ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಸಿಎಂಗೆ ಪತ್ರ ಬರೆಯಲಾಗಿದೆ. ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳಿಂದ ಪತ್ರ ಬರೆಯಲಾಗಿದೆ. ಘಟನೆ ಬಗ್ಗೆ ಒಂದಷ್ಟು ಅಂಶಗಳನ್ನು ಉಲ್ಲೇಖಿಸಿ ಪತ್ರ ಬರೆಯಲಾಗಿದೆ.
ಆರ್ ಸಿಬಿ ಮ್ಯಾನೇಜ್ಮೆಂಟ್ ಕಡೆಯಿಂದ ಸೋಷಿಯಲ್ ಮೀಡಿಯಾ ಪೋಸ್ಟ್ ಬಗ್ಗೆ ಉಲ್ಲೇಖಿಸಿ ಪತ್ರ ಬರೆಯಲಾಗಿದೆ. ಪೋಸ್ಟ್ ನೋಡಿಯೇ ಹೆಚ್ಚಿನ ಜನರು ಸ್ಟೇಡಿಯಂಗೆ ಆಗಮಿಸಿದ್ದರು. ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಆದರೆ ಟಿಕೆಟ್ ಬಗ್ಗೆ ಸಾಕಷ್ಟು ಗೊಂದಲ ಇತ್ತು. ಎರಡೂ ಕಡೆ ಕಾರ್ಯಕ್ರಮ ಆಯೋಜಿಸಿದ್ದರಿಂದ ಊಹೆಗೂ ಮೀರಿದ ಜನ ಕಾರ್ಯಕ್ರಮಗಳಿಗೆ ಬಂದಿದ್ದರು. ಹೀಗಾಗಿ ಪೊಲೀಸರಿಗೆ ಬಂದೋಬಸ್ತ್ ವೇಳೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಸ್ಪೆನ್ಷನ್ ರಿವೋಕ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.