ಬೆಂಗಳೂರು: ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಗೆ ನಿಂದಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಕುರಿತು ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಈ ವಿಚಾರವಾಗಿ ಪುನೀತ್ ಕೆರೆಹಳ್ಳಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಆರೋಪ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ..
ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.