ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ ಸೇರಿದಂತೆ ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ, ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದಷ್ಟು ಬೇಗ ಕೇಸ್ ನ್ನು ಇತ್ಯರ್ಥಪಡಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಬೇಕೆಂದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ, ವಿನಯ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಪ್ರಕರಣದ ತನಿಖೆಯನ್ನು ಪೊಲೀಸರು ಎಲ್ಲ ಆಯಾಮಗಳಲ್ಲಿ ನಡೆಸುತ್ತಿದ್ದಾರೆ. ಸದ್ಯದಲ್ಲಿಯೇ ಪೊಲೀಸರು ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದ್ದಾರೆ. ಈ ಮಧ್ಯೆ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪೊಲೀಸರು ಹೊಸ ಯೋಜನೆ ರೂಪಿಸಿದ್ದಾರೆ.
ಸಾಮಾನ್ಯ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದರೆ ಸಾಕಷ್ಟು ಸಮಯ ಹಿಡಿಯಲಿದೆ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್ ರಚಿಸಬೇಕೆಂದು ಪೊಲೀಸರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಹೀಗಾದರೆ ದರ್ಶನ್ ಆಂಡ್ ಟೀಂಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ.
ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಕ್ಕೆ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಪ್ರತ್ಯೇಕ ಕೋರ್ಟ್ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ನೋಡಬೇಕಿದೆ.