ರಾಜ್ಯ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರ ಓಲೈಕೆಗೆ ಮುಂದಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಒಂದೆಡೆ ಗ್ಯಾರಂಟಿ ಯೋಜನೆಯ ಹಣ ನಿಗದಿತ ಸಮಯಕ್ಕೆ ಬರುತ್ತಿಲ್ಲ ಎನ್ನುವ ಕೂಗು ಜೋರಾಗುತ್ತಿದ್ದರೂ ಡೋಂಟ್ ಕೇರ್ ಎನ್ನುವಂತೆ ಸರ್ಕಾರ ತನ್ನ ಪಕ್ಷದ ಕಾರ್ಯಕರ್ತರ ಮನವೊಲಿಕೆ ಕಾರ್ಯ ಮಾಡುವಂತಹ ನಿರ್ಧಾರ ಮಾಡಿದೆ.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರಿಗೆ ಈ ಕೂಡಲೇ 7.65 ಕೋಟಿ ರೂ. ಹಣ ಬಿಡುಗಡೆಗೆ ಆದೇಶಿಸಿದೆ.
ಏಪ್ರಿಲ್ ತಿಂಗಳಿಂದ ಆಗಸ್ಟ್ ವರೆಗಿನ ಸಭಾ ಭತ್ಯೆ ಬಿಡುಗಡೆಗೆ ಮಾಡುವಂತೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಕಾರ್ಯಕರ್ತರನ್ನು ಖುಷಿ ಪಡಿಸಲೆಂದೇ ಬರೋಬ್ಬರಿ ಮೂರು ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಿ ಸರ್ಕಾರ ಸಂತೃಪ್ತವಾಗಿದೆ.