ಬೆಂಗಳೂರು: ಮತ ಕಳ್ಳತನದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ. 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ರಾಹುಲ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಈಗಾಗಲೇ ಸಿದ್ದತೆ ಶುರುವಾಗಿದ್ದು, ಫ್ರೀಡಂ ಪಾರ್ಕ್ ನ ಕಾಂಪೌಂಡ್ ಒಡೆದು ರಸ್ತೆ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲದೆ ಪ್ರತಿಭಟನೆ ನಡೆಯುವ ಸ್ಥಳದಲ್ಲಿದ್ದ ಬಿಬಿಎಂಪಿ ಅರಣ್ಯ ಘಟಕದ ಮರಗಳನ್ನು ಕಡಿದುರುಳಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.
ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದಾರೆ. ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಯಿಂದಲೂ ಜನರನ್ನು ಸೇರಿಸಲು ಕಾಂಗ್ರೆಸ್ ನಾಯಕರು ತಯಾರಿ ಮಾಡುತ್ತಿದ್ದು, ಹೋರಾಟ ನಡೆಸಲು ಸುಮಾರು 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.
ಸದ್ಯ, ಪ್ರತಿಭಟನೆ ಸಲುವಾಗಿ ಕಾಂಪೌಂಡ್ ಮತ್ತು ಮರ ಕಡಿದುರುಳಿಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕಪಡಿಸಿದ್ದು, ಈ ಹಿನ್ನೆಲೆ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪಿಸಿ ಮಹಾದೇವ ಸ್ವಾಮಿ ಅವರ ಮೇಲೆ ಬಿಬಿಎಂಪಿ ಅಧಿಕಾರಿಗಳಿಂದ ಎಫ್ ಐ ಅರ್ ದಾಖಲಾಗಿದೆ.



















