ಪಾಕಿಸ್ತಾನ ವಿರುದ್ಧದ ಪ್ರತೀಕಾರದ ಮುಹೂರ್ತ ನಾಳೆಯೇ ನಿಗದಿಯಾಗುತ್ತಾ? ಏಕೆಂದರೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 11ಕ್ಕೆ ಭದ್ರತಾ ಸಂಪುಟ ಸಮಿತಿ ಸಭೆ ಕರೆಯಲಾಗಿದೆ.
ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ನಿತ್ಯವೂ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದೆ. ಈ ನಿಟ್ಟಿನಲ್ಲಿ ಭಾರತದ ಮುಂದಿನ ನಡೆ ಏನಾಗಿರಬೇಕು? ಅನ್ನೋದರ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸಲಾಗುತ್ತೆ. ಈ ಮಹತ್ವದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಪ್ರಮುಖ ಸಚಿವರು ಭಾಗಿಯಾಗಲಿದ್ದಾರೆ. ಹೀಗಾಗಿ ನಾಳಿನ ಪ್ರಧಾನಿ ನೇತೃತ್ವದ ಭದ್ರತಾ ಸಂಪುಟ ಸಮಿತಿ ಸಭೆ ತೀವ್ರ ಕುತೂಹಲ ಕೆರಳಿಸಿದೆ.