ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿರುವ ರಾಜಕೀಯ ಬೆಳವಣಿಗೆಯ ನಡುವೆಯೇ ಮಾಜಿ ಸಚಿವ ಜಮೀರ್ ಅವರದ್ದು ಎನ್ನಲಾದ ವಾಟ್ಸಪ್ ಸ್ಟೇಟಸ್ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಮೀರ್ ಅವರ ಸ್ಟೇಟಸ್ನಲ್ಲಿ ಅಭಿಮಾನಿಯೊಬ್ಬನ ಆಕ್ರೋಶಭರಿತ ಮಾತುಗಳಿರುವ ವಿಡಿಯೋ ಕಾಣಿಸಿಕೊಂಡಿದ್ದು, ಅದು ರಾಜಕೀಯ ವಲಯದಲ್ಲಿ ಹಲವು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ವಿಡಿಯೋದಲ್ಲಿ ಮಿರ್ ಸಾಧಿಕ್ ಕಥೆಯನ್ನು ಉಲ್ಲೇಖಿಸಲಾಗಿದ್ದು, ಶಾಸಕ ರಿಜ್ವಾನ್ ಅರ್ಷದ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಫೋಟೋಗಳನ್ನೂ ಬಳಸಲಾಗಿದೆ. ಇದೇ ವೇಳೆ ಮಧ್ಯಭಾಗದಲ್ಲಿ ಜಮೀರ್ ಅವರ ಫೋಟೋವನ್ನು ಸಿಂಹಕ್ಕೆ ಹೋಲಿಕೆ ಮಾಡುವ ರೀತಿಯಲ್ಲಿ ಪ್ರದರ್ಶಿಸಿರುವುದು ಗಮನ ಸೆಳೆದಿದೆ. ವಿಡಿಯೋದಲ್ಲಿರುವ ಸಂದೇಶ ಮತ್ತು ದೃಶ್ಯಗಳ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಮೀರ್ ತಮ್ಮ ಅಸಮಾಧಾನವನ್ನು ಈ ರೀತಿಯಾಗಿ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆಯೇ ಎಂಬ ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ವಾಟ್ಸಪ್ ಸ್ಟೇಟಸ್ ವೈರಲ್ ಆಗುತ್ತಿದ್ದಂತೆ ಅದರ ರಾಜಕೀಯ ಅರ್ಥಗಳ ಬಗ್ಗೆ ವಿವಿಧ ರೀತಿಯ ವಿಶ್ಲೇಷಣೆಗಳು ನಡೆಯುತ್ತಿದ್ದು, ಜಮೀರ್ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲವೂ ಹೆಚ್ಚಾಗಿದೆ.
ಇದನ್ನೂ ಓದಿ : ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು


















