ಹುಬ್ಬಳ್ಳಿ : ರಣಜಿ ಟ್ರೋಫಿ ಫೈನಲ್ ಪಂದ್ಯ ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದು, ಜಮ್ಮು-ಕಾಶ್ಮೀರ ಮತ್ತು ಕರ್ನಾಟಕ ಸೆಣಸಾಡುತ್ತಿವೆ. ಈ ಪಂದ್ಯ ವೀಕ್ಷಿಸಲು ಹುಬ್ಬಳ್ಳಿಯಲ್ಲಿನ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ (KSCA) ಮೈದಾನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಆಗಮಿಸಿದ್ದಾರೆ.
ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರ ಟೀಂ ಫೈನಲ್ ಹಂತಕ್ಕೆ ಬಂದಿದ್ದು, ಗೆಲುವಿನ ಮೆಟ್ಟಿಲಲ್ಲಿ ನಿಂತಿದ್ದಾರೆ. ಪಂದ್ಯ ವೀಕ್ಷಣೆಗೆ ಆಗಮಿಸಿದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಿಂದ ನೇರವಾಗಿ ಮೈದಾನಕ್ಕೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿ ಆಗಮನದ ಹಿನ್ನೆಲೆ ಮೈದಾನದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಭದ್ರತಾ ಸಿಬ್ಬಂದಿ ಸಿಎಂ ಅವರನ್ನು ಕಟ್ಟು ನಿಟ್ಟಿನ ಭದ್ರತೆಯೊಂದಿಗೆ ಮೈದಾನಕ್ಕೆ ಕರೆದುಕೊಂಡು ಬರಲಾಗಿದೆ.
ಇದನ್ನೂ ಓದಿ : ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು


















