ಬೆಂಗಳೂರು: ಸಿಲಿಕಾನ್ ಸಿಟಿ ಒಂದೇ ಮಳೆಗೆ ನಲುಗಿ ಹೋಗಿದೆ. ಹೀಗಾಗಿ ಸಿಎಂ ಹಲವಾರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಬಿಬಿಎಂಪಿ ಎಚ್ಚೆತ್ತುಕೊಂಡಿದೆ.
ಯಾವುದೇ ರೀತಿ ಪ್ರಭಾವಿಗಳಿದ್ದರೂ ಸರಿ ಒತ್ತುವರಿ ಕಟ್ಟಡಗಳನ್ನು ನೆಲಸಮ ಮಾಡಬೇಕೆಂದು ಸಿಎಂ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ಒತ್ತುವರಿ ಮಾಡಿಕೊಂಡವರಿಗೆ ಶಾಕ್ ನೀಡಲು ಬಿಬಿಎಂಪಿ ಮುಂದಾಗಿದೆ.
ಬೆಂಗಳೂರಿನಲ್ಲಿ ಮಳೆಗೆ ನೆರೆ ಬರುತ್ತಿದ್ದು, ಸಿಎಂ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಪಾಲಿಕೆ ಮತ್ತೆ ರಾಜಕಾಲುವೆಯ ತಂಟೆಗೆ ಹೋಗುತ್ತಿದೆ. ಈಗಾಗಲೇ ಬಿಬಿಎಂಪಿ ಕಮಿಷನರ್ ವಲಯ ಆಯುಕ್ತರುಗಳಿಗೆ ಒತ್ತುವರಿ ಅಂಕಿ-ಸಂಖ್ಯೆ ನೀಡುವಂತೆ ಕೇಳಿದ್ದಾರೆ. ಮೂರು ದಿನಗಳೊಳಗಾಗಿ ಈ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಹೀಗಾಗಿ ಮುಂದಿನ ವಾರದಿಂದ ಮತ್ತೆ ರಾಜಕಾಲುವೆ ಒತ್ತುವರಿ ಕಾರ್ಯಾಚರಣೆ ಆರಂಭವಾಗುವ ಸಾಧ್ಯತೆ ಇದೆ. ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ 1963 ಕಡೆ ರಾಜಕಾಲುವೆ ಒತ್ತುವರಿಯಾಗಿದೆ. 149 ಕಟ್ಟಡಗಳಿಗೆ ಕೋರ್ಟ್ ನಿಂದ ಸ್ಟೇ ಸಿಕ್ಕಿದೆ.