ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾವು ರಂಗೇರಿದೆ. ಹೀಗಾಗಿ ಆರೋಪ- ಪ್ರತ್ಯಾರೋಪಗಳು ಸಾಮಾನ್ಯ ಎನ್ನುವಂತಾಗಿದೆ. ಈ ಮಧ್ಯೆ, ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ವಿರುದ್ಧ ನೀಡಿರುವ ಹೇಳಿಕೆಯೇ ಈಗ ಜೆಡಿಎಸ್ ಗೆ ಅಸ್ತ್ರವಾಗಿದೆ.
ಭಾನುವಾರ ಕೋಡಂಬಹಳ್ಳಿಯಲ್ಲಿ ಪ್ರಚಾರ ನಡೆಸಿದ್ದ ಡಿಕೆ ಸುರೇಶ್ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಟೀಕಿಸಿದ್ದರು. ನಾಳೆ ಆಂಬ್ಯುಲೆನ್ಸ್ ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ. ಪ್ರಚಾರಕ್ಕೆ ಬರಲಿ, ಅವರ ಆರೋಗ್ಯವೂ ಚೆನ್ನಾಗಿರಲಿ ಎಂದು ಮಾತನಾಡಿದ್ದರು. ಈ ವಿಚಾರಕ್ಕೆ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಈಗ ಜೆಡಿಎಸ್ ಪ್ರಚಾರ ನಡೆಸುತ್ತಿವೆ. ಇಂದು ಇದೇ ವಿಚಾರ ಮುಂದಿಟ್ಟುಕೊಂಡು ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. 26 ಹಳ್ಳಿಗಳ ಗ್ರಾಮಸ್ಥರ ಜೊತೆ ನಿಖಿಲ್ ಪ್ರಚಾರ ಮಾಡಲಿದ್ದಾರೆ. ಸಂಸದ ಯದುವೀರ್ ಒಡೆಯರ್ ಜೊತೆ ಪ್ರತ್ಯೇಕವಾಗಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ. ಒಂದೇ ದಿನದಲ್ಲಿ 25 ಸಾವಿರಕ್ಕೂ ಅಧಿಕ ಮತದಾರರ ಸಂಪರ್ಕ ಮಾಡಲು ಜೆಡಿಎಸ್ ಮುಂದಾಗಿದೆ. ದೇವೇಗೌಡರ ಬಗ್ಗೆ ನೀಡಿರುವ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಪ್ರಚಾರ ನಡೆಸಲು ಜೆಡಿಎಸ್ ಮುಂದಾಗಿದೆ.