ಜೂನ್ 25ಕ್ಕೆ ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷವಾಗಲಿದೆ. ಆ ವೇಳೆ ಕಾಂಗ್ರೆಸ್ ನವರು ಸಂವಿಧಾನವನ್ನ ಐಸಿಯುನಲ್ಲಿ ಇಟ್ಟಿದ್ದರು. ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿದ್ದ ಅಂದಿನ ಘಳಿಗೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಾಗಿತ್ತು ಎಂದು ಬಿಜೆಪಿ ನಾಯಕರು ಹಳೆ ಘಟನೆ ನೆನೆದಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪ್ರೆಸ್ ಮೀಟ್ ಮಾಡಿ ಎಂಎಲ್ ಸಿ ಸಿ.ಟಿ. ರವಿ ಮಾತನಾಡಿದ್ರು. ಹಲವು ಮುಖಂಡರು ಉಪಸ್ಥಿತರಿದ್ರು.
ಮುಂದುವರೆದ ಮಾತನಾಡಿದ ನಾಯಕರು. ಅಂದು ವಿಪಕ್ಷ ನಾಯಕರನ್ನು ಬಂಧಿಸಲಾಗಿತ್ತು. ಆಗ ಜೆ.ಪಿ. ನಾರಾಯಣ ಚಳುವಳಿ ಪ್ರಜಾಪ್ರಭುತ್ವ ವಿರೋಧಿಗಳಿಗೆ ಪಾಠ ಕಲಿಸಿತ್ತು. ಕಾಂಗ್ರೆಸ್ ಸಂವಿಧಾನ ವಿರೋಧಿ ಅನ್ನೋ ಜನ ಜಾಗೃತಿಯಲ್ಲಿ ಸಿಟಿಜನ್ ಫಾರ್ ಸೋಶಿಯಲ್ ಜಸ್ಟೀಸ್ ಸಂಘಟನೆ ಜೊತೆ ಬಿಜೆಪಿ ವಿರೋಧಿಸಿತ್ತು ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಜೂನ್ 26ರಂದು ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ ಅಂತಾ ಬಿಜೆಪಿ ನಾಯಕರು ತಿಳಿಸಿದ್ದಾರೆ.