ಬೆಂಗಳೂರು : ಕರ್ನಾಟಕ ಯುವ ಕಾಂಗ್ರೆಸ್ನ 15 ಪದಾಧಿಕಾರಿಗಳನ್ನು ಏಕಾಏಕಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ನ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ.

ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಭಾರತೀಯ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.
ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ನಾಯಕತ್ವ ಗುಣ ಪ್ರದರ್ಶಿಸಬೇಕು ಮತ್ತು ಕಡ್ಡಾಯ ಸಭೆಗಳಿಗೆ ಹಾಜರಾಗಬೇಕು ಎಂಬ ನಿಯಮವಿದೆ. ಆದರೆ, ಈ 15 ಪದಾಧಿಕಾರಿಗಳು ಕಳೆದ ಕೆಲವು ಸಮಯದಿಂದ ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ ಮತ್ತು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂಬುದು ಪರಿಶೀಲನೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಯ ಹಿತದೃಷ್ಟಿಯಿಂದ ಹೈಕಮಾಂಡ್ ಈ ದಿಟ್ಟ ಕ್ರಮ ಕೈಗೊಂಡಿದೆ.
ವಜಾಗೊಂಡ ಪದಾಧಿಕಾರಿಗಳ ಪಟ್ಟಿ ಹೀಗಿದೆ
- ದೀಪಿಕಾ ರೆಡ್ಡಿ, ರಾಜ್ಯ ಉಪಾಧ್ಯಕ್ಷರು
ರಾಜ್ಯ ಪ್ರಧಾನ ಕಾರ್ಯದರ್ಶಿಗಳು
- ಸಿ.ಎಸ್. ಫ್ರಾನ್ಸಿಸ್ ಬೆನಿಟೊ
- ಬಿಂದು ಗೌಡ
- ಸುಮನ್ ಸೋಮಶೇಖರ್
- ಅಫ್ನಾನಖಾನಂ
- ಲಕ್ಷ್ಮಿ ಕೆ
- ವಾಣಿ ಕಾಂಬ್ಳೆ
- ದಕ್ಷಿಣಮೂರ್ತಿ ಎಸ್
ರಾಜ್ಯ ಕಾರ್ಯದರ್ಶಿಗಳು
- ಅಬ್ದುಲ್ ರವೂಫ್ ಬಿ.ಎಂ.
- ಸೈಯದ್ ಹುಸೇನ್ ಖಾದ್ರಿ
- ಮೊಹಮ್ಮದ್ ಆಸಿಫ್ ಹುಸೇನ್
- ಎಸ್.ಆರ್.ಎಸ್ ಚಂದ್ ಬಾಷಾ
- ಗೋವರ್ಧನ್ ಜಿ.ಸಿ.
- ಪವನ್ ಸಾಲಿಯಾನ್
- ನವೀನ್ ಕುಮಾರ್ ಎಸ್.
ಇದನ್ನೂ ಓದಿ : ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ


















