ಕಾರವಾರ : ಮೀನುಗಾರಿಕೆಗೆ ತೆರಳಿದ್ದ ವೇಳೆ ಮೀನು ಚುಚ್ಚಿ ಗಾಯಗೊಂಡಿದ್ದ ಯುವಕ ಸಾವನ್ನಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಕ್ಷಯ ಅನಿಲ ಮಾಜಾಳಿಕರ್ (24) ಮೃತ ದುರ್ದೈವಿ.

ಮಂಗಳವಾರ (ಅ.14) ಅಕ್ಷಯ ಅನಿಲ ಮಾಜಾಳಿಕರ್ ಕಾರವಾರದ ಮಾಜಾಳಿ ದಾಂಡೇ ಭಾಗದಲ್ಲಿ ದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದ. ಈ ವೇಳೆ ದೋಣಿಯಲ್ಲಿ ಕುಳಿತಿದ್ದ ಅಕ್ಷಯಗ್ ನೀರಿನಿಂದ ಜಿಗಿದು ಹೊಟ್ಟೆಗೆ ಮೀನು ಚುಚ್ಚಿತ್ತು. 8-10 ಇಂಚು ಉದ್ದವಿದ್ದ ಚೂಪು ಮೂತಿಯ ಕಾಂಡೆ(ತೊಳೆ) ಮೀನಿನ ಮೂತಿ ಚುಚ್ಚಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅಕ್ಷಯನನ್ನು ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ, ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಅಕ್ಷಯ ಅನಿಲ ಮಾಜಾಳಿಕರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕ ಸಾವನ್ನಪ್ಪಿದ್ದಾಗಿ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದು, ಆಸ್ಪತ್ರೆ ಆವರಣದಲ್ಲಿ ಅಕ್ಷಯ ಅನಿಲನ ಸಂಬಂಧಿಕರು ಧರಣಿ ನಡೆಸುತ್ತಿದ್ದಾರೆ.