ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಲು ಅಭ್ಯರ್ಥಿಗಳು ಮುಂದಾಗಿದ್ದಾರೆ.
ಇತ್ತೀಚೆಗೆ ನಡೆದ ಪರೀಕ್ಷೆಯ ವೇಳೆ ಇಂಗ್ಲಿಷ್ – ಕನ್ನಡ ತರ್ಜುಮೆಯಿಂದಾಗಿ ಸಾಕಷ್ಟು ಕನ್ನಡ ಮಾಧ್ಯಮದ ಅಭ್ಯರ್ಥಿಗಳು ಫೇಲ್ ಆಗಿದ್ದಾರೆ. ಹೀಗಾಗಿ ಕೆಪಿಎಸ್ಸಿ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಹೀಗಾಗಿ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಸಾಕಷ್ಟು ಹೋರಾಟ ನಡೆಸಿದ್ದರು. ಆದರೂ ಸರ್ಕಾರ ಎಚ್ಚೆತ್ತುಕೊಂಡು ಮರು ಪರೀಕ್ಷೆಗೆ ಅವಕಾಶ ನೀಡಿಲ್ಲ. ಹೀಗಾಗಿ KSAT, ಹೈಕೋರ್ಟ್ ಮೊರೆ ಹೋಗಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ.
ಈಗಾಗಲೇ ಹೈಕೋರ್ಟ್ ಮೊರೆ ಹೋದ 34 ಅಭ್ಯರ್ಥಿಗಳಿಗೆ ಮೇನ್ಸ್ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎನ್ನಲಾಗಿದೆ. ತಾನು ಮಾಡಿದ ತಪ್ಪು ಒಪ್ಪಿಕೊಂಡು ಮೇನ್ಸ್ ಪರೀಕ್ಷೆಗೆ ಕೆಪಿಎಸ್ಸಿ ಅವಕಾಶ ನೀಡಿದೆ. ಇದನ್ನು ಗಮನಿಸಿದ 2 ಸಾವಿರ ಅಭ್ಯರ್ಥಿಗಳು ಕೆಪಿಎಸ್ಸಿ ವಿರುದ್ಧ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಮೇ 3ರಂದು ಕೆಎಎಸ್ ಮುಖ್ಯ ಪರೀಕ್ಷೆ ನಡೆಯಲಿದೆ. ಹೀಗಾಗಿ ನಮಗೂ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಮರು ಅಧಿಸೂಚನೆ ನೀಡುವಂತೆ ಅಭ್ಯರ್ಥಿಗಳು ಅರ್ಜಿ ಹಾಕಲಿದ್ದಾರೆ ಎನ್ನಲಾಗಿದೆ.