ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಪಕ್ಕದ ಕರ್ನಾಟಕದಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ಕಾಂಗ್ರೆಸ್ ದೂರವಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಪುಣೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಉಳಿಸುವುದಕ್ಕಾಗಿ ನಾವೆಲ್ಲ ಸೇರಿ ಕಾಂಗ್ರೆಸ್ ನ್ನು ದೂರ ಇಡಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿ ಜನರಿಗೆ ಮತ ನೀಡುವಂತೆ ಒತ್ತಾಯಿಸಿತು. ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸಿತು. ಆದರೆ, ಕಾಂಗ್ರೆಸ್ಗೆ ತನ್ನ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಅದರ ಬದಲಿಗೆ, ಈಗ ಅಲ್ಲಿ ಸುಲಿಗೆ ಮಾಡುತ್ತಿದೆ. ದಿನಕ್ಕೊಂದು ಹಗರಣಗಳು ಬಯಲಾಗುತ್ತಿವೆ. ಕಾಂಗ್ರೆಸ್ ಹಗಲು ಹೊತ್ತಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಹೂಡಿಕೆ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ಪುಣೆ ಯಾವಾಗಲೂ ಬಿಜೆಪಿಯ ಸಿದ್ಧಾಂತ ಮತ್ತು ದೃಷ್ಟಿಕೋನವನ್ನು ಬೆಂಬಲಿಸುತ್ತದೆ. ಈ ವಿಶ್ವಾಸಕ್ಕಾಗಿ ಪುಣೆಯ ಜನರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.