ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮಲ್ಲಿಗೆ ಹೂವು ತಂದಿದ್ದಕ್ಕೆ ಕೇರಳದ ನಟಿಗೆ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂ. ದಂಡ!

September 8, 2025
Share on WhatsappShare on FacebookShare on Twitter



ತಿರುವನಂತಪುರಂ: ಶಸ್ತ್ರಾಸ್ತ್ರ, ಸ್ಫೋಟಕ, ಚೂರಿ-ಚಾಕು, ಲೈಟರ್, ಪಟಾಕಿ ಮುಂತಾದ ವಸ್ತುಗಳನ್ನು ವಿಮಾನದಲ್ಲಿ ಕೊಂಡೊಯ್ಯುವುದಕ್ಕೆ ನಿಷೇಧವಿರುವ ಬಗ್ಗೆ ಕೇಳಿರುತ್ತೀರಿ. ಆದರೆ, ಮಲ್ಲಿಗೆ ಹೂವಿಗೂ ಇಂಥ ನಿಷೇಧವಿದೆ ಎಂಬುದು ನಿಮಗೆ ಗೊತ್ತಿತ್ತೇ?

ಹೌದು, ಆಸ್ಟ್ರೇಲಿಯಾದಲ್ಲಿ ಇಂಥದ್ದೊಂದು ನಿಯಮವಿದೆಯಂತೆ. ಈ ನಿಯಮದ ಬಗ್ಗೆ ಗೊತ್ತಿಲ್ಲದೇ ಆ ದೇಶಕ್ಕೆ ಪ್ರಯಾಣಿಸಿರುವ ಮಲಯಾಳಂನ ಖ್ಯಾತ ನಟಿ ನವ್ಯಾ ನಾಯರ್ ಕೊನೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ 1.14 ಲಕ್ಷ ರೂಪಾಯಿ ದಂಡ ಪಾವತಿಸಿದ್ದಾರೆ.

ವಿಕ್ಟೋರಿಯಾದ ಮಲಯಾಳಿ ಅಸೋಸಿಯೇಷನ್ ಆಯೋಜಿಸಿದ್ದ ಓಣಂ ಆಚರಣೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ತಾವು ಮುಡಿಯಲೆಂದು ಮಲ್ಲಿಗೆ ಹೂವನ್ನು ಅವರು ತಮ್ಮ ಕೈಚೀಲದಲ್ಲಿ ತೆಗೆದುಕೊಂಡು ಹೋಗಿದ್ದರು. ಆದರೆ, ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಹೂವಿರುವುದನ್ನು ನೋಡಿದ ಸಿಬ್ಬಂದಿ, ಅವರನ್ನು ತಡೆದು, ಇದಕ್ಕೆ ಇಲ್ಲಿ ನಿಷೇಧವಿದೆ ಎಂದು ತಿಳಿಸಿದ್ದಾರೆ. ಅಲ್ಲದೇ, ಮಲ್ಲಿಗೆಯನ್ನು ತಂದಿದ್ದಕ್ಕೆ 1.14 ಲಕ್ಷ ರೂ.ದಂಡವನ್ನೂ ವಿಧಿಸಿದ್ದಾರೆ.

ದಂಡ ವಿಧಿಸಿದ್ದೇಕೆ?
ಕಾರ್ಯಕ್ರಮದಲ್ಲಿ ಮಾತನಾಡಿದ ನವ್ಯಾ ನಾಯರ್, “ನಾನು ಇಲ್ಲಿಗೆ ಬರುವ ಮೊದಲು, ನನ್ನ ತಂದೆ ನನಗೆ ಮಲ್ಲಿಗೆ ಹೂವನ್ನು ತಂದುಕೊಟ್ಟಿದ್ದರು. ಅದನ್ನು ಎರಡು ಭಾಗಗಳಾಗಿ ಮಾಡಿ, ಒಂದು ಭಾಗವನ್ನು ಕೊಚ್ಚಿಯಿಂದ ಸಿಂಗಾಪುರದವರೆಗೆ ಮುಡಿದುಕೊಂಡಿದ್ದೆ. ಇನ್ನೊಂದು ಭಾಗವನ್ನು ಸಿಂಗಾಪುರದಿಂದ ಮುಂದಿನ ಪ್ರಯಾಣಕ್ಕಾಗಿ ನನ್ನ ಹ್ಯಾಂಡ್‌ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದೆ.

ಆದರೆ, ನಾನು ಮಾಡಿದ್ದು ಅಲ್ಲಿನ ಕಾನೂನಿಗೆ ವಿರುದ್ಧವಾಗಿತ್ತು. ತಿಳಿಯದೆ ಮಾಡಿದ ತಪ್ಪಾದರೂ, ತಿಳಿಯದಿರುವುದು ಕ್ಷಮೆಗೆ ಕಾರಣವಾಗುವುದಿಲ್ಲ. 15 ಸೆಂ.ಮೀ. ಉದ್ದದ ಮಲ್ಲಿಗೆ ಹೂವಿನ ಮಾಲೆ ತಂದಿದ್ದಕ್ಕಾಗಿ ಅಧಿಕಾರಿಗಳು ನನಗೆ 1,980 ಆಸ್ಟ್ರೇಲಿಯನ್ ಡಾಲರ್ (ಸುಮಾರು ₹1.14 ಲಕ್ಷ) ದಂಡ ವಿಧಿಸಿದರು. ಉದ್ದೇಶಪೂರ್ವಕವಲ್ಲದಿದ್ದರೂ ಅದು ತಪ್ಪೇ. 28 ದಿನಗಳೊಳಗೆ ದಂಡವನ್ನು ಪಾವತಿಸಬೇಕೆಂದು ಅವರು ಹೇಳಿದ್ದಾರೆ” ಎಂದು ಘಟನೆಯನ್ನು ವಿವರಿಸಿದ್ದಾರೆ.

ಆಸ್ಟ್ರೇಲಿಯಾದ ವಿಮಾನ ನಿಲ್ದಾಣದ ನಿಯಮಗಳೇನು?
ಆಸ್ಟ್ರೇಲಿಯಾ ತನ್ನ ಪರಿಸರವನ್ನು ರಕ್ಷಿಸಲು ಅತ್ಯಂತ ಕಟ್ಟುನಿಟ್ಟಿನ ಜೈವಿಕ ಸುರಕ್ಷತಾ ನಿಯಮಗಳನ್ನು ಅನುಸರಿಸುತ್ತಿದೆ. ಈ ನಿಯಮಗಳ ಪ್ರಕಾರ, ದೇಶದೊಳಗೆ ತರಬಹುದಾದ ಮತ್ತು ತರಬಾರದ ವಸ್ತುಗಳ ಬಗ್ಗೆ ಸ್ಪಷ್ಟ ಸೂಚನೆಗಳಿವೆ.

ಘೋಷಿಸಬೇಕಾದ ವಸ್ತುಗಳು:
ಪ್ರಯಾಣಿಕರು ಆಸ್ಟ್ರೇಲಿಯಾಗೆ ಬಂದಿಳಿದಾಗ ತಮ್ಮ “ಆಗಮನ ಕಾರ್ಡ್” (Incoming Passenger Arrival Card) ನಲ್ಲಿ ತಮ್ಮಲ್ಲಿ ಇರುವಂತಹ ಎಲ್ಲಾ ಆಹಾರ, ಸಸ್ಯಜನ್ಯ ವಸ್ತುಗಳು, ಮತ್ತು ಪ್ರಾಣಿ ಉತ್ಪನ್ನಗಳ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು.

ನಿಷೇಧಿತ ವಸ್ತುಗಳು:
ತಾಜಾ ಹಣ್ಣು-ತರಕಾರಿಗಳು, ಮಾಂಸ, ಕೋಳಿ, ಹಂದಿಮಾಂಸ, ಮೊಟ್ಟೆ, ಡೈರಿ ಉತ್ಪನ್ನಗಳು, ಮತ್ತು ಜೀವಂತ ಸಸ್ಯಗಳು ಅಥವಾ ಬೀಜಗಳನ್ನು ಆಸ್ಟ್ರೇಲಿಯಾಗೆ ತರುವಂತಿಲ್ಲ. ಈ ವಸ್ತುಗಳು ಆಸ್ಟ್ರೇಲಿಯಾದ ವಿಶಿಷ್ಟ ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರಬಹುದಾದ ಗಂಭೀರ ಕೀಟಗಳು ಮತ್ತು ರೋಗಗಳನ್ನು ಪರಿಚಯಿಸಬಹುದು. ನವ್ಯಾ ನಾಯರ್ ತಂದ ಹೂವು ‘ಸಸ್ಯಜನ್ಯ ವಸ್ತು’ ವರ್ಗಕ್ಕೆ ಸೇರಿದ್ದರಿಂದ, ಅದನ್ನು ಘೋಷಿಸದೇ ತಂದಿದ್ದು ಕಾನೂನಿನ ಉಲ್ಲಂಘನೆಯಾಗಿದೆ.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?
ವಸ್ತುಗಳನ್ನು ಘೋಷಿಸದಿದ್ದರೆ ಅಥವಾ ತಪ್ಪು ಮಾಹಿತಿ ನೀಡಿದರೆ ಕಠಿಣ ದಂಡ ವಿಧಿಸಲಾಗುತ್ತದೆ. ಜತೆಗೆ, ಬೇರೆ ರೀತಿಯ ಕ್ರಮಗಳನ್ನೂ ಕೈಗೊಳ್ಳಬಹುದಾಗಿದೆ.

  • 5,500 ಆಸ್ಟ್ರೇಲಿಯನ್ ಡಾಲರ್ ವರೆಗೆ ದಂಡ
  • ವೀಸಾ ರದ್ದುಗೊಳಿಸುವಿಕೆ
  • ದೇಶಕ್ಕೆ ಪ್ರವೇಶ ನಿರಾಕರಣೆ
  • ದೇಶದಿಂದ ಹೊರಡುವವರೆಗೆ ವಲಸೆ ಬಂಧನದಲ್ಲಿಡುವುದು
Tags: Actressfined Rs 1.14 lakhjasmine flowersKeralaMelbourne airport
SendShareTweet
Previous Post

ಗಾಜಾ ಮೇಲೆ ಪ್ರಬಲ ಚಂಡಮಾರುತ ಅಪ್ಪಳಿಸಲಿದೆ, ಸಿದ್ಧರಾಗಿ: ಹಮಾಸ್‌ಗೆ ಇಸ್ರೇಲ್ ವಾರ್ನಿಂಗ್!

Next Post

ಸೋಮವಾರ ಮಾರುಕಟ್ಟೆಯಲ್ಲಿ ಸೊರಗಿದ ಚಿನ್ನ, ಬೆಳ್ಳಿ!

Related Posts

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ
ವಿದೇಶ

ನೇಪಾಳದ ಓಲಿ ಸರ್ಕಾರದ ವಿರುದ್ಧ ಸಿಡಿದೆದ್ದು ಬೀದಿಗಿಳಿದ ಯುವಜನರು: ಭಾರೀ ಪ್ರತಿಭಟನೆ, ಸಂಸತ್ ಭವನಕ್ಕೆ ಮುತ್ತಿಗೆ

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ
ವಿದೇಶ

ಸುಪ್ರೀಂನಲ್ಲಿ ತಮ್ಮ ವಿರುದ್ಧ ತೀರ್ಪು ಬಂದರೆ ಅರ್ಧದಷ್ಟು ಸುಂಕ ಮರುಪಾವತಿ: ಟ್ರಂಪ್ ಸರ್ಕಾರ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ
ದೇಶ

ಭಾರತ-ವಿರೋಧಿ ಪೋಸ್ಟ್‌ಗೆ ಎಲಾನ್ ಮಸ್ಕ್‌ರ ಟ್ವೀಟರ್‌ನಿಂಗ ಫ್ಯಾಕ್ಟ್-ಚೆಕ್: ಟ್ರಂಪ್ ಸಲಹೆಗಾರ ಕೆಂಡ

ಚೀನಾದಿಂದ ಭಾರತ, ರಷ್ಯಾ ದೋಸ್ತಿ ಕಟ್‌ ! : ಟ್ರಂಪ್‌ ಹೇಳಿದ್ದೇನು ?
ವಿದೇಶ

ಚೀನಾದಿಂದ ಭಾರತ, ರಷ್ಯಾ ದೇಶಗಳ ದೋಸ್ತಿ ಕಟ್‌ !  : ಟ್ರಂಪ್‌ ಹೇಳಿದ್ದೇನು ?  

ಮಾರ್ಕ್ ಜುಕರ್‌ಬರ್ಗ್ ವಿರುದ್ಧವೇ ದೂರು ದಾಖಲಿಸಿದ ಮಾರ್ಕ್ ಜುಕರ್‌ಬರ್ಗ್!
ವಿದೇಶ

ಮಾರ್ಕ್ ಜುಕರ್‌ಬರ್ಗ್ ವಿರುದ್ಧವೇ ದೂರು ದಾಖಲಿಸಿದ ಮಾರ್ಕ್ ಜುಕರ್‌ಬರ್ಗ್!

“ಭಾರತದೊಂದಿಗೆ ಉತ್ತಮ ಬಾಂಧವ್ಯವಿದೆ, ಆದರೆ…”: ಸುಂಕ ವಿವಾದದ ನಡುವೆ ಟ್ರಂಪ್ ಹೇಳಿಕೆ
ವಿದೇಶ

“ಭಾರತದೊಂದಿಗೆ ಉತ್ತಮ ಬಾಂಧವ್ಯವಿದೆ, ಆದರೆ…”: ಸುಂಕ ವಿವಾದದ ನಡುವೆ ಟ್ರಂಪ್ ಹೇಳಿಕೆ

Next Post
ಸೋಮವಾರ ಮಾರುಕಟ್ಟೆಯಲ್ಲಿ ಸೊರಗಿದ ಚಿನ್ನ, ಬೆಳ್ಳಿ!

ಸೋಮವಾರ ಮಾರುಕಟ್ಟೆಯಲ್ಲಿ ಸೊರಗಿದ ಚಿನ್ನ, ಬೆಳ್ಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರವಿ ಶಂಕರ್‌ ಪ್ರಸಾದ್ ಸಲಹೆ

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರಾಹುಲ್‌ ಗೆ ರವಿ ಶಂಕರ್‌ ಪ್ರಸಾದ್ ಸಲಹೆ

Recent News

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯ ಎಲ್ಲಾ ಕ್ರೆಸ್ಟ್‌ ಗೇಟ್‌ ಗಳನ್ನು ಶೀಘ್ರದಲ್ಲೇ ಅಳವಡಿಸುವಂತೆ ಆಗ್ರಹಿಸಿ ಪ್ರತಿಭಟನೆ 

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರವಿ ಶಂಕರ್‌ ಪ್ರಸಾದ್ ಸಲಹೆ

ವಿದೇಶಿ ಪ್ರವಾಸಕ್ಕೆ ತೆರಳುವ ಬದಲು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿ : ರಾಹುಲ್‌ ಗೆ ರವಿ ಶಂಕರ್‌ ಪ್ರಸಾದ್ ಸಲಹೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ನಾಳೆ ಉಪರಾಷ್ಟ್ರಪತಿ ಚುನಾವಣೆ | ನಾಳೆ ರಾತ್ರಿಯೇ ಫಲಿತಾಂಶ ಪ್ರಕಟ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್‌ ಪ್ರಕರಣ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ 14 ದಿನ ನ್ಯಾಯಾಂಗ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat