ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

March 3, 2026
Share on WhatsappShare on FacebookShare on Twitter

ನವದೆಹಲಿ : ಇರಾನ್‌ನ ಸರ್ವೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಅವರ ಹತ್ಯೆಯ ಕುರಿತು ಕೇಂದ್ರ ಸರ್ಕಾರದ ಮೌನವನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ಮೌನವಾಗಿರುವುದು ‘ತಟಸ್ಥ’ ನಿಲುವಲ್ಲ, ಬದಲಾಗಿ ಜವಾಬ್ದಾರಿಯಿಂದ ನುಣುಚಿಕೊಳ್ಳುವ ‘ಪಲಾಯನವಾದ’ ಎಂದು ಅವರು ಬಣ್ಣಿಸಿದ್ದಾರೆ.

ಆಂಗ್ಲ ಪತ್ರಿಕೆಯೊಂದಕ್ಕೆ ಬರೆದಿರುವ ಲೇಖನದಲ್ಲಿ ಯುಪಿಎ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್ ಮತ್ತು ಭಾರತದ ನಡುವಿನ ಐತಿಹಾಸಿಕ ಹಾಗೂ ಆಯಕಟ್ಟಿನ ಬಾಂಧವ್ಯವನ್ನು ಸ್ಮರಿಸಿದ್ದಾರೆ. ಅಲ್ಲದೆ, ಕಷ್ಟಕಾಲದಲ್ಲಿ ಇರಾನ್ ಭಾರತದ ನೆರವಿಗೆ ಧಾವಿಸಿದ್ದ ಹಲವು ಪ್ರಸಂಗಗಳನ್ನು ನೆನಪಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಖಮೇನಿ ಹತ್ಯೆಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ಕಾಪಾಡುವಂತೆ ಮತ್ತು ಉದ್ವಿಗ್ನತೆ ಕಡಿಮೆ ಮಾಡುವಂತೆ ಮಾತ್ರ ಮನವಿ ಮಾಡಿದೆ. ಇದನ್ನು ಕಟುವಾಗಿ ಟೀಕಿಸಿರುವ ಸೋನಿಯಾ ಗಾಂಧಿ, “ಶಾಂತಿ ಮಾತುಕತೆಗಳು ನಡೆಯುತ್ತಿರುವಾಗಲೇ ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿರುವುದು ಅಂತಾರಾಷ್ಟ್ರೀಯ ಸಂಬಂಧಗಳಲ್ಲಿನ ದೊಡ್ಡ ಬಿರುಕನ್ನು ಎತ್ತಿ ತೋರಿಸುತ್ತಿದೆ. ಇಂಥದ್ದೊಂದು ಕೃತ್ಯಕ್ಕೆ ಭಾರತದ ಮೌನವು ಅಚ್ಚರಿಯದ್ದು” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಆರಂಭದಲ್ಲಿ ಅಮೆರಿಕ-ಇಸ್ರೇಲ್ ದಾಳಿಯನ್ನು ಕಡೆಗಣಿಸಿ, ಯುಎಇ ಮೇಲೆ ಇರಾನ್ ನಡೆಸಿದ ಪ್ರತಿದಾಳಿಯನ್ನು ಮಾತ್ರ ಖಂಡಿಸಿದರು. ನಂತರ ‘ಸಂವಾದ ಮತ್ತು ರಾಜತಾಂತ್ರಿಕತೆ’ಯ ಬಗ್ಗೆ ಮಾತನಾಡಿದರು. ಆದರೆ ಅಮೆರಿಕ ಮತ್ತು ಇಸ್ರೇಲ್ ಪ್ರಚೋದನಕಾರಿಯಾಗಿ ನಡೆಸಿದ ದಾಳಿ ಬಗ್ಗೆ ಅವರು ತುಟಿ ಬಿಚ್ಚಲಿಲ್ಲವೇಕೆ?” ಎಂದು ಸೋನಿಯಾ ಪ್ರಶ್ನಿಸಿದ್ದಾರೆ. ಖಮೇನಿ ಹತ್ಯೆಗೂ ಕೇವಲ 48 ಗಂಟೆಗಳ ಮುಂಚೆ ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ ನೀಡಿ ಬೆಂಜಮಿನ್ ನೆತನ್ಯಾಹು ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ ವಿಷಯದಲ್ಲಿ ಇರಾನ್ ಬೆಂಬಲದ ನೆನಪು

ತಮ್ಮ ಲೇಖನದಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆಯಾಗಿರುವ ಸೋನಿಯಾ, “1994ರಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆಯ (OIC) ಕೆಲವು ವಿಭಾಗಗಳು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಕಾಶ್ಮೀರದ ವಿಚಾರವಾಗಿ ಭಾರತದ ವಿರುದ್ಧ ನಿರ್ಣಯ ಮಂಡಿಸಲು ಯತ್ನಿಸಿದಾಗ, ಅದನ್ನು ತಡೆಯುವಲ್ಲಿ ಟೆಹ್ರಾನ್ ಪ್ರಮುಖ ಪಾತ್ರ ವಹಿಸಿತ್ತು. ಭಾರತದ ಆರ್ಥಿಕತೆಯ ಅತ್ಯಂತ ಸೂಕ್ಷ್ಮ ಘಟ್ಟದಲ್ಲಿ ಕಾಶ್ಮೀರ ವಿಷಯವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವುದನ್ನು ಇರಾನ್‌ನ ಆ ಮಧ್ಯಸ್ಥಿಕೆ ತಪ್ಪಿಸಿತ್ತು” ಎಂದು ಸ್ಮರಿಸಿದ್ದಾರೆ.
ಅಷ್ಟೇ ಅಲ್ಲದೆ, ಪಾಕಿಸ್ತಾನದ ಗಡಿಯ ಸಮೀಪವಿರುವ ಜಹೇದಾನ್‌ನಲ್ಲಿ ಭಾರತವು ತನ್ನ ರಾಜತಾಂತ್ರಿಕ ಕಚೇರಿ ತೆರೆಯಲು ಇರಾನ್ ಅವಕಾಶ ಮಾಡಿಕೊಟ್ಟಿತು. ಇದು ಗ್ವಾದರ್ ಬಂದರು ಮತ್ತು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (CPEC) ಅಭಿವೃದ್ಧಿಗೆ ಪ್ರತಿಯಾಗಿ ಆಯಕಟ್ಟಿನ ಸಮತೋಲನ ಕಾಯ್ದುಕೊಳ್ಳಲು ಭಾರತಕ್ಕೆ ನೆರವಾಯಿತು ಎಂಬುದನ್ನು ಅವರು ಬೊಟ್ಟು ಮಾಡಿದ್ದಾರೆ.

ವಾಜಪೇಯಿ ನಿಲುವು ಮತ್ತು ‘ವಸುಧೈವ ಕುಟುಂಬಕಂ’

2001ರ ಏಪ್ರಿಲ್‌ನಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇರಾನ್‌ಗೆ ಅಧಿಕೃತ ಭೇಟಿ ನೀಡಿದಾಗ, ಭಾರತ ಮತ್ತು ಇರಾನ್ ನಡುವಿನ ಐತಿಹಾಸಿಕ ಹಾಗೂ ಸಮಕಾಲೀನ ಆಳವಾದ ಬಾಂಧವ್ಯವನ್ನು ಆತ್ಮೀಯವಾಗಿ ಪುನರುಚ್ಚರಿಸಿದ್ದರು. ಆದರೆ ಆ ದೀರ್ಘಕಾಲದ ಸಂಬಂಧಗಳು ಪ್ರಸ್ತುತ ಸರ್ಕಾರಕ್ಕೆ ಯಾವುದೇ ಪ್ರಸ್ತುತತೆ ಹೊಂದಿಲ್ಲದಂತೆ ಕಾಣುತ್ತಿದೆ ಎಂದು ಸೋನಿಯಾ ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತವು ಇರಾನ್ ಮತ್ತು ಇಸ್ರೇಲ್ ಎರಡೂ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಶಾಂತಿ ಕಾಪಾಡುವಂತೆ ಮನವಿ ಮಾಡುವ ರಾಜತಾಂತ್ರಿಕ ಅವಕಾಶವನ್ನು ಹೊಂದಿದೆ. ಆದರೆ ಆ ಅವಕಾಶವು ವಿಶ್ವಾಸಾರ್ಹತೆಯ ಮೇಲೆ ನಿಂತಿದೆ. “ಭಾರತವು ‘ವಸುಧೈವ ಕುಟುಂಬಕಂ’ ಎಂಬ ಆದರ್ಶವನ್ನು ಪ್ರತಿಪಾದಿಸುತ್ತಾ ಬಂದಿದೆ. ಇದು ಕೇವಲ ಪ್ರದರ್ಶನದ ರಾಜತಾಂತ್ರಿಕತೆಯ ಘೋಷಣೆಯಾಗಬಾರದು. ನ್ಯಾಯ, ಸಂಯಮ ಮತ್ತು ಮಾತುಕತೆಗೆ ಬದ್ಧವಾಗಿರಬೇಕು. ನಿಯಮಾಧಾರಿತ ವ್ಯವಸ್ಥೆಯು ಕುಸಿಯುತ್ತಿರುವ ಇಂತಹ ಹೊತ್ತಿನಲ್ಲಿ ಮೌನ ವಹಿಸುವುದು ಜವಾಬ್ದಾರಿಯಿಂದ ನುಣುಚಿಕೊಂಡಂತೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ಸುಮಾರು ಒಂದು ಕೋಟಿ ಭಾರತೀಯರು ವಾಸಿಸುತ್ತಿದ್ದಾರೆ. ಹಿಂದಿನ ಹಲವು ಬಿಕ್ಕಟ್ಟುಗಳ ಸಂದರ್ಭದಲ್ಲಿ ಭಾರತವು ತನ್ನ ನಾಗರಿಕರನ್ನು ರಕ್ಷಿಸುವಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಿದೆಯೇ ಹೊರತು ಯಾರದೋ ಕೈಗೊಂಬೆಯಾಗಿ ಅಲ್ಲ ಎಂದು ಅವರು ತಮ್ಮ ವಾದವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

Tags: IndiaKarnataka News beatPolitician
SendShareTweet
Previous Post

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

Next Post

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

Related Posts

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ
ದೇಶ

ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನ ಉಳಿಸಿಕೊಳ್ಳಲು ‘ಕೈ’ ಕಸರತ್ತು | ಮಹಾರಾಷ್ಟ್ರದ ಏಕೈಕ ಸ್ಥಾನಕ್ಕಾಗಿ ಶಿವಸೇನೆಯೊಂದಿಗೆ ಚೌಕಾಸಿ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ
ದೇಶ

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಬೇಡ | ಸುಪ್ರೀಂಗೆ ಕೇರಳ

ಬ್ಯಾಂಕ್ ಖಾತೆದಾರರೇ ಗಮನಿಸಿ.. ದುಡ್ಡಿದ್ದರೂ ನಿಮ್ಮ ಖಾತೆ ಬ್ಲಾಕ್ ಆಗತ್ತೆ ಹುಷಾರ್!
ದೇಶ

ಬ್ಯಾಂಕ್ ಖಾತೆದಾರರೇ ಗಮನಿಸಿ.. ದುಡ್ಡಿದ್ದರೂ ನಿಮ್ಮ ಖಾತೆ ಬ್ಲಾಕ್ ಆಗತ್ತೆ ಹುಷಾರ್!

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

Next Post
15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳ ಅರೆಸ್ಟ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

Recent News

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ಪಾಕ್‌ ಆಟಗಾರರ ಕಡೆಗಣನೆ ಆರೋಪ | ‘ದಿ ಹಂಡ್ರೆಡ್’ ಟೂರ್ನಿಯಲ್ಲಿ IPL ಮಾಲೀಕರ ಪ್ರಭಾವ, ತಾರತಮ್ಯದ ವಿವಾದ!

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

ನಿಧಾನವಾಗಿ ಓಡಿಸು ಎಂದವನ ಮೇಲೆಯೇ ಕಾರು ಹರಿಸಿ ಹತ್ಯೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat