ಹುಬ್ಬಳ್ಳಿ: ಯೂಟ್ಯೂಬರ್ ಮುಕುಳೆಪ್ಪ ಅಲಿಯಾಸ್ ಖ್ವಾಜಾ ಶಿರಹಟ್ಟಿ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪತ್ನಿ ಗಾಯತ್ರಿಯನ್ನು ನಿನ್ನೆ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸೋಮವಾರ ವಿದ್ಯಾನಗರ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ʻಖ್ವಾಜಾ ಅವರು ಮಗಳಿಗೆ ಮೋಸ ಮಾಡಿ ಅಪಹರಿಸಿಕೊಂಡು ಮದುವೆಯಾಗಿದ್ದಾರೆʼ ಎಂದು ಆರೋಪಿಸಿ ಗಾಯತ್ರಿ ಅವರ ತಾಯಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹಳೇಹುಬ್ಬಳ್ಳಿ ಠಾಣೆ ಬದಲು, ವಿದ್ಯಾನಗರ ಠಾಣೆಗೆ ಅವರನ್ನು ಕರೆತಂದಿದ್ದರು.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗಾಯತ್ರಿ ʻಎರಡು ವರ್ಷಗಳಿಂದ ನಾವು ಪ್ರೀತಿಸುತ್ತಿದ್ದು, ಎರಡು ತಿಂಗಳ ಹಿಂದೆ ಸ್ವಇಚ್ಛೆಯಿಂದ ಅವರನ್ನು ಮದುವೆಯಾಗಿದ್ದೇನೆ. ʻಯುವತಿ ವಯಸ್ಕಳಾಗಿದ್ದು, ಸ್ವಇಚ್ಛೆಯಿಂದ ಮದುವೆಯಾಗಿರುವುದಾಗಿ ಹೇಳಿದ್ದಾರೆ. ಒತ್ತಾಯಪೂರ್ವಕವಾಗಿ ಬೆದರಿಕೆ ಹಾಕಿ ಮದುವೆ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿಕೆ ನೀಡಿದ್ದರೆ ಕ್ರಮ ಕೈಗೊಳ್ಳಬಹುದಿತ್ತು. ಹೀಗಾಗಿ ಅಪಹರಣ ಆರೋಪದಲ್ಲಿ ಹುರಳಿಲ್ಲʼ ಎಂದು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.