ಬೆಂಗಳೂರು : ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಸಂಬಂಧ ಒಂದೆಡೆ ರಾಜಕೀಯ ಜಟಾಪಟಿಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ.
ಜೈಬಾ ತಬಸ್ಸುಮ್ ಮತ್ತಿತರರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಹಲವು ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ.
ಬೇಡಿಕೆಗಳು ಏನು?
30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರ್ವಸತಿಕರಾಗಿದ್ದು, ಎಸ್ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು ಒದಗಿಸುತ್ತಿವೆ. ಸರ್ಕಾರ 5 ಕಿ.ಮೀ. ಅಂತರದಲ್ಲೇ ಮರುವಸತಿ ಕಲ್ಪಿಸಬೇಕು ಮತ್ತು ಅಲ್ಲಿಯವರೆಗೆ 3 ಹೊತ್ತಿನ ಪೌಷ್ಟಿಕಾಂಶಯುತ ಆಹಾರ ಒದಗಿಸಬೇಕು. 300 ಪ್ರತ್ಯೇಕ ಟೆಂಟ್, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ ಆರೋಗ್ಯ ತಪಾಸಣೆ ಮಾಡಬೇಕು. ಜೊತೆಗೆ ಕಟ್ಟಡ ತೆರವಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ.
ಇದನ್ನೂ ಓದಿ : ಬೆಂಗಳೂರಿನ ಮಹಿಳೆಗೆ ಹೊರ ರಾಜ್ಯದವರಿಂದ ಜೀವ ಬೆದರಿಕೆ : FIR ದಾಖಲು



















