ಕೊಪ್ಪಳ : ಕೊಪ್ಪಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಶಹಾಪುರ ಸರ್ವಿಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಸುಮಾರು 12ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಶಹಾಪುರ ಗ್ರಾಮದ ರಾಮಣ್ಣ ಜಂಬಣ್ಣ ಕೋರಿ ಅವರಿಗೆ ಸೇರಿದ ಕುರಿಗಳಾಗಿದ್ದು, ಕುರಿ ಮೇಯಿಸಲು ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಈ ದುರ್ಘಟನೆ ನಡೆದಿದೆ. ಹೆದ್ದಾರಿ ಮೂಲಕ ಹೊಸಪೇಟೆಗೆ ತೆರಳುತ್ತಿದ್ದ ಲಾರಿ ಕುರಿಗಳ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಕುರಿಗಳು ಸಾವನ್ನಪ್ಪಿವೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಮುನಿರಾಬಾದ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಮುನಿರಾಬಾದ್ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ಸಂಬಂಧ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ಇದನ್ನೂ ಓದಿ : ಹಾಸನ | ಚಲಿಸುತ್ತಿದ್ದ ಆಟೋ ಮೇಲೆ ಕಾಡುಕೋಣ ದಾಳಿ



















